AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು; 702 ದಿನಗಳ ಸತತ ಚಿಕಿತ್ಸೆಯ ನಂತರವೂ ಬದುಕುಳಿಯಲಿಲ್ಲ ಜೀವ

ಗಾಯಗೊಂಡಿದ್ದ ಪ್ರಿಷಾಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತಿತ್ತು. ಆದ್ರೆ ಅಂದಿನಿಂದ ಇಂದಿನವರೆಗೂ ಆಸ್ಪತ್ರೆಯಲ್ಲೇ ಸುಮಾರು 702 ದಿನಗಳ ಸತತ ಚಿಕಿತ್ಸೆಯ ನಂತರವೂ ಪ್ರಿಷಾ ಬದುಕುಳಿಯಲಿಲ್ಲ. ಬದುಕಿನ ಯುದ್ಧದಲ್ಲಿ ಹೋರಾಡುತ್ತಲೇ ಪ್ರಾಣ ಬಿಟ್ಟಿದ್ದಾರೆ.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು; 702 ದಿನಗಳ ಸತತ ಚಿಕಿತ್ಸೆಯ ನಂತರವೂ ಬದುಕುಳಿಯಲಿಲ್ಲ ಜೀವ
ಬಾಲಕಿ ಪ್ರಿಷಾ
TV9 Web
| Updated By: ಆಯೇಷಾ ಬಾನು|

Updated on:Feb 11, 2022 | 11:53 AM

Share

ಬೆಂಗಳೂರು: ಶಾಲೆಗೆ ಹೋಗುವಾಗ ಮರದ ಕೊಂಬೆ ಮುರಿದು ಬಿದ್ದು ಗಾಯಗೊಂಡಿದ್ದ ಬಾಲಕಿ ಪ್ರಿಷಾ(9) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸುಮಾರು 702 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಪ್ರಿಷಾ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ. ಮುದ್ದು ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 702 ದಿನಗಳ ಸತತ ಚಿಕಿತ್ಸೆಯ ನಂತರವೂ ಪ್ರಿಷಾಳನ್ನು ಉಳಿಸಿಕೊಳ್ಳಲಾಗಿಲ್ಲ.

2020ರ ಮಾರ್ಚ್ 11ರಂದು ಪ್ರಿಷಾ ತಂದೆ ಜತೆ ಸ್ಕೂಟಿಯಲ್ಲಿ ಸ್ಕೂಲ್​ಗೆ ಹೊರಟಿದ್ದಳು. ಈ ವೇಳೆ ರಾಮಮೂರ್ತಿನಗರದ ಕೌದೇನಹಳ್ಳಿ ಬಳಿ ಒಣಗಿದ ರೆಂಬೆ ಬಿದ್ದು ಬಾಲಕಿ ಪ್ರಿಷಾ ತೀವ್ರವಾಗಿ ಗಾಯಗೊಂಡಿದ್ದಳು. ಬಾಲಕಿಯ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಕೂಡ್ಲೇ ಆಕೆಯನ್ನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗೆ 702 ದಿನಗಳಿಂದಲೂ ಆಸ್ಪತ್ರೆಯಲ್ಲೇ ಟ್ರೀಟ್‌ಮೆಂಟ್‌ ಪಡೆಯುತ್ತಿದ್ದ ಪ್ರಿಶಾ, ಇವತ್ತು ಚಿಕಿತ್ಸೆ ಫಲಿಸದೇ ಪ್ರಾಣ ಬಿಟ್ಟಿದ್ದಾಳೆ.

ಸ್ಕೂಲ್‌ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗಿಂತ ಮುಂದಿದ್ದ ಬಾಲಕಿ, ಹಾಡು ಡ್ಯಾನ್ಸ್‌ ಅಂತಾ ಚೂಟಿಯಾಗಿದ್ಲು. ಒಬ್ಬೇ ಮಗಳು ಆಗಿದ್ರಿಂದ ಹೆತ್ತವರು ಕೂಡಾ ಮುದ್ದಾಗಿ ಬೆಳೆಸಿದ್ರು. ಆದ್ರೆ ವಿಧಿಯಾಟವೇ ಬೇರೆಯಾಗಿತ್ತು. ಇನ್ನು ಈ ಅವಘಡದ ಬಗ್ಗೆ ಗೊತ್ತಾಗ್ತಿದ್ದಂತೆ ನಟ ಸುದೀಪ್‌ ಕೂಡಾ ವಿಡಿಯೋ ಕಾಲ್‌ ಮಾಡಿ ಪುಟಾಣಿಯ ಆರೋಗ್ಯ ವಿಚಾರಿಸಿದ್ರು. ಪ್ರಿಶಾಗೆ ಧೈರ್ಯ ತುಂಬಿದ್ರು. ಅಷ್ಟೇ ಅಲ್ಲ ಒಬ್ಬ ವೈದ್ಯರನ್ನೂ ಪ್ರಿಶಾಳ ಚಿಕಿತ್ಸೆಗೆ ನೇಮಕ ಮಾಡಿದ್ರಂತೆ. ಮಾಜಿ ಸಿಎಂ ಕುಮಾರ ಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಈ ಆಸ್ಪತ್ರೆಗೆ ಬಂದಾಗ ಆರೋಗ್ಯ ವಿಚಾರಿಸಿದ್ರು. ಇಷ್ಟೆಲ್ಲಾ ಆದ್ರೂ ಪ್ರಿಶಾ ಮಾತ್ರ ಬದುಕುಳಿಯಲೇ ಇಲ್ಲ. ಬರೋಬ್ಬರಿ 700 ದಿನ ಚಿಕಿತ್ಸೆ ನೀಡಿರೋದ್ರಿಂದ ಅಂದಾಜು 80 ಲಕ್ಷ ರೂಪಾಯಿ ಬಿಲ್‌ ಆಗಿದೆ. ಶುಲ್ಕ ಭರಿಸುವ ಭರವಸೆ ನೀಡಿದ್ದ ಪಾಲಿಕೆ ಇದನ್ನ ಬರಿಸೋ ಸಾಧ್ಯತೆ ಇದೆ. ಅದೇನೇ ಇದ್ರೂ ಒಣಗಿ ಹೋಗಿದ್ದ ಮರದ ರೆಂಬೆಗೆ ಬಾಲಕಿ ಬಲಿಯಾಗಿದ್ದು ನಿಜಕ್ಕೂ ದುರಂತ. ಪಾಲಿಕೆ ಇನ್ನಾದ್ರೂ ಇಂಥಾ ರೆಂಬೆ ಕೊಂಬೆಗಳನ್ನ ತೆಗೆಸಿ ಅನಾಹುತಗಳನ್ನ ತಪ್ಪಿಸಬೇಕಿದೆ .

ಇದನ್ನೂ ಓದಿ: ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು

Published On - 11:45 am, Thu, 10 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ