AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
|

Updated on: Mar 29, 2021 | 12:43 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಯುವತಿಯನ್ನು ಕರೆತರುವುದಕ್ಕೆ ಅನುಮತಿ ನೀಡಿ ಎಂದು ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಬಳಿ ಅನುಮತಿ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಸಿಡಿಯಲ್ಲಿದ್ದ ಯುವತಿಯಿಂದ ಹೈಕೋರ್ಟ್ ಸಿಜೆಗೆ ಇ ಮೇಲ್ ಮೂಲಕ ಪತ್ರ ಬಂದಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಇದೇ ಬೆನ್ನಲ್ಲೆ ದೂರುದಾರೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುತ್ತೇವೆ ಎಂದು ವಕೀಲ ಕೆ.ಎನ್.ಜಗದೀಶ್ ಕುಮಾರ್ ತಿಳಿಸಿದ್ದರು. ಅದರಂತೆಯೆ ಈಗ ಯುವತಿಯನ್ನು ಕರೆತರುವುದಕ್ಕೆ ಅನುಮತಿ ಕೇಳಿದ್ದಾರೆ. ಈ ವೇಳೆ ಅವರು ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸ್ತೇವೆ. ಜಡ್ಜ್ ಮುಂದೆಯೇ ಯುವತಿ ಹೇಳಿಕೆಯನ್ನು ನೀಡುತ್ತಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಚಪ್ಪಲಿ ಎಸೆಯುತ್ತಾರೆ. ಹೀಗಾದಾಗ ಯುವತಿಗೆ ಹೇಗೆ ರಕ್ಷಣೆ ಸಿಗುತ್ತೆ ಎಂದು ಪ್ರಶ್ನೆ ಮಾಡಿದ್ದರು. ಆರೋಪಿ ಅರೆಸ್ಟ್ ಆಗದೇ ಒಳ್ಳೆ ವಾತಾವರಣ ನಿರ್ಮಾಣ ಇಲ್ಲ. ಸುಪ್ರೀಂಕೋರ್ಟ್‌ಗೂ ಒಂದು ಅರ್ಜಿಯನ್ನು ಹಾಕುತ್ತೇವೆ ಎಂದು ಟಿವಿ9ಗೆ ಜಗದೀಶ್ ಕುಮಾರ್ ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹೆಚ್ಚುವರಿ ಭದ್ರತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್ಸ್ ಪೆಕ್ಟರ್, 10 ಜನ ಸಬ್ ಇನ್ಸ್ ಪೆಕ್ಟರ್, 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ