AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 29, 2021 | 12:43 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಯುವತಿಯನ್ನು ಕರೆತರುವುದಕ್ಕೆ ಅನುಮತಿ ನೀಡಿ ಎಂದು ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಬಳಿ ಅನುಮತಿ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಸಿಡಿಯಲ್ಲಿದ್ದ ಯುವತಿಯಿಂದ ಹೈಕೋರ್ಟ್ ಸಿಜೆಗೆ ಇ ಮೇಲ್ ಮೂಲಕ ಪತ್ರ ಬಂದಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಇದೇ ಬೆನ್ನಲ್ಲೆ ದೂರುದಾರೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುತ್ತೇವೆ ಎಂದು ವಕೀಲ ಕೆ.ಎನ್.ಜಗದೀಶ್ ಕುಮಾರ್ ತಿಳಿಸಿದ್ದರು. ಅದರಂತೆಯೆ ಈಗ ಯುವತಿಯನ್ನು ಕರೆತರುವುದಕ್ಕೆ ಅನುಮತಿ ಕೇಳಿದ್ದಾರೆ. ಈ ವೇಳೆ ಅವರು ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸ್ತೇವೆ. ಜಡ್ಜ್ ಮುಂದೆಯೇ ಯುವತಿ ಹೇಳಿಕೆಯನ್ನು ನೀಡುತ್ತಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಚಪ್ಪಲಿ ಎಸೆಯುತ್ತಾರೆ. ಹೀಗಾದಾಗ ಯುವತಿಗೆ ಹೇಗೆ ರಕ್ಷಣೆ ಸಿಗುತ್ತೆ ಎಂದು ಪ್ರಶ್ನೆ ಮಾಡಿದ್ದರು. ಆರೋಪಿ ಅರೆಸ್ಟ್ ಆಗದೇ ಒಳ್ಳೆ ವಾತಾವರಣ ನಿರ್ಮಾಣ ಇಲ್ಲ. ಸುಪ್ರೀಂಕೋರ್ಟ್‌ಗೂ ಒಂದು ಅರ್ಜಿಯನ್ನು ಹಾಕುತ್ತೇವೆ ಎಂದು ಟಿವಿ9ಗೆ ಜಗದೀಶ್ ಕುಮಾರ್ ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹೆಚ್ಚುವರಿ ಭದ್ರತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್ಸ್ ಪೆಕ್ಟರ್, 10 ಜನ ಸಬ್ ಇನ್ಸ್ ಪೆಕ್ಟರ್, 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ