AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 29, 2021 | 12:43 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಯುವತಿಯನ್ನು ಕರೆತರುವುದಕ್ಕೆ ಅನುಮತಿ ನೀಡಿ ಎಂದು ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಬಳಿ ಅನುಮತಿ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಸಿಡಿಯಲ್ಲಿದ್ದ ಯುವತಿಯಿಂದ ಹೈಕೋರ್ಟ್ ಸಿಜೆಗೆ ಇ ಮೇಲ್ ಮೂಲಕ ಪತ್ರ ಬಂದಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಇದೇ ಬೆನ್ನಲ್ಲೆ ದೂರುದಾರೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುತ್ತೇವೆ ಎಂದು ವಕೀಲ ಕೆ.ಎನ್.ಜಗದೀಶ್ ಕುಮಾರ್ ತಿಳಿಸಿದ್ದರು. ಅದರಂತೆಯೆ ಈಗ ಯುವತಿಯನ್ನು ಕರೆತರುವುದಕ್ಕೆ ಅನುಮತಿ ಕೇಳಿದ್ದಾರೆ. ಈ ವೇಳೆ ಅವರು ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸ್ತೇವೆ. ಜಡ್ಜ್ ಮುಂದೆಯೇ ಯುವತಿ ಹೇಳಿಕೆಯನ್ನು ನೀಡುತ್ತಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಚಪ್ಪಲಿ ಎಸೆಯುತ್ತಾರೆ. ಹೀಗಾದಾಗ ಯುವತಿಗೆ ಹೇಗೆ ರಕ್ಷಣೆ ಸಿಗುತ್ತೆ ಎಂದು ಪ್ರಶ್ನೆ ಮಾಡಿದ್ದರು. ಆರೋಪಿ ಅರೆಸ್ಟ್ ಆಗದೇ ಒಳ್ಳೆ ವಾತಾವರಣ ನಿರ್ಮಾಣ ಇಲ್ಲ. ಸುಪ್ರೀಂಕೋರ್ಟ್‌ಗೂ ಒಂದು ಅರ್ಜಿಯನ್ನು ಹಾಕುತ್ತೇವೆ ಎಂದು ಟಿವಿ9ಗೆ ಜಗದೀಶ್ ಕುಮಾರ್ ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹೆಚ್ಚುವರಿ ಭದ್ರತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್ಸ್ ಪೆಕ್ಟರ್, 10 ಜನ ಸಬ್ ಇನ್ಸ್ ಪೆಕ್ಟರ್, 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ