AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೋರ್ಟ್‌ಗೆ ಯುವತಿಯ ಕರೆತರುವುದಕ್ಕೆ ಅನುಮತಿ ಕೋರಿ ಕೋರ್ಟ್ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಮನವಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
|

Updated on: Mar 29, 2021 | 12:43 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಯುವತಿಯನ್ನು ಕರೆತರುವುದಕ್ಕೆ ಅನುಮತಿ ನೀಡಿ ಎಂದು ಡೆಪ್ಯುಟಿ ರಿಜಿಸ್ಟ್ರಾರ್‌ಗೆ ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಡೆಪ್ಯುಟಿ ರಿಜಿಸ್ಟ್ರಾರ್ ಬಳಿ ಅನುಮತಿ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಸಿಡಿಯಲ್ಲಿದ್ದ ಯುವತಿಯಿಂದ ಹೈಕೋರ್ಟ್ ಸಿಜೆಗೆ ಇ ಮೇಲ್ ಮೂಲಕ ಪತ್ರ ಬಂದಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು. ಇದೇ ಬೆನ್ನಲ್ಲೆ ದೂರುದಾರೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುತ್ತೇವೆ ಎಂದು ವಕೀಲ ಕೆ.ಎನ್.ಜಗದೀಶ್ ಕುಮಾರ್ ತಿಳಿಸಿದ್ದರು. ಅದರಂತೆಯೆ ಈಗ ಯುವತಿಯನ್ನು ಕರೆತರುವುದಕ್ಕೆ ಅನುಮತಿ ಕೇಳಿದ್ದಾರೆ. ಈ ವೇಳೆ ಅವರು ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸ್ತೇವೆ. ಜಡ್ಜ್ ಮುಂದೆಯೇ ಯುವತಿ ಹೇಳಿಕೆಯನ್ನು ನೀಡುತ್ತಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಚಪ್ಪಲಿ ಎಸೆಯುತ್ತಾರೆ. ಹೀಗಾದಾಗ ಯುವತಿಗೆ ಹೇಗೆ ರಕ್ಷಣೆ ಸಿಗುತ್ತೆ ಎಂದು ಪ್ರಶ್ನೆ ಮಾಡಿದ್ದರು. ಆರೋಪಿ ಅರೆಸ್ಟ್ ಆಗದೇ ಒಳ್ಳೆ ವಾತಾವರಣ ನಿರ್ಮಾಣ ಇಲ್ಲ. ಸುಪ್ರೀಂಕೋರ್ಟ್‌ಗೂ ಒಂದು ಅರ್ಜಿಯನ್ನು ಹಾಕುತ್ತೇವೆ ಎಂದು ಟಿವಿ9ಗೆ ಜಗದೀಶ್ ಕುಮಾರ್ ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹೆಚ್ಚುವರಿ ಭದ್ರತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕೋರ್ಟ್‌ಗೆ ಭದ್ರತೆ ವದಗಿಸಲಾಗಿದೆ. ಸಿಡಿ ಲೇಡಿ ಕೋರ್ಟ್‌ಗೆ ಹಾಜರಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಕೋರ್ಟ್ ಬಳಿ ಹೆಚ್ಚುವರಿ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್ಸ್ ಪೆಕ್ಟರ್, 10 ಜನ ಸಬ್ ಇನ್ಸ್ ಪೆಕ್ಟರ್, 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ