AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಲೇಡಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್  ಕಮಿಷನರ್ ವಿರುದ್ಧ ಭಾರಿ ಆರೋಪ
CD ಲೇಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Mar 25, 2021 | 12:46 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರಿಗೆ ಪ್ರಕರಣದ ಪಾತ್ರಧಾರಿಗಳು ಚಳ್ಳೆಹಣ್ಣು ತಿನ್ನುಸುತ್ತಲೇ ಇದ್ದಾರೆ. ಅದರಲ್ಲೂ CD ಲೇಡಿಯಂತೂ ತನಗೆ ನಾಲ್ಕಾರು ನೋಟಿಸ್​ಗಳು ಬಂದಿದ್ದರೂ ಯಾವುದಕ್ಕೂ ಕ್ಯಾರೆ ಅನ್ನುತ್ತಿಲ್ಲ. ಪೊಲೀಸರ ಕರೆಗೆ ರೆಸ್ಪಾನ್ಸ್​ ನೀಡುತ್ತಿಲ್ಲ. ಈ ಮಧ್ಯೆ, ತಗೊಳ್ಳಿ ಮತ್ತೊಂದು ವಿಡಿಯೋ ಎಂದು ಮಾಧ್ಯಮಗಳ ಮೂಲಕ ಒಂದು ನಿಮಿಷ 13 ಸೆಕೆಂಡ್​ಗಳ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಲೇಡಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ ಕುಮಾರ್‌, ಮಹಿಳಾ ಸಂಘಟನೆಗಳ ಬಳಿ ಕೇಳಿಕುಳೊಳ್ಳುತ್ತಿದ್ದೇನೆ. ನಮ್ಮ ತಂದೆ, ತಾಯಿಗೆ ರಕ್ಷಣೆ ನೀಡಿ. ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್‌ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ. ಮಾರ್ಚ್ 12ರಂದೇ ನಗರ ಪೊಲೀಸ್ ಆಯುಕ್ತರಿಗೆ, ವಿಶೇಷ ತನಿಖಾ ತಂಡಕ್ಕೆ ವಿಡಿಯೋವನ್ನು ಕಳಿಸಿದ್ದೆ. ಆದರೆ ನಾನು ವಿಡಿಯೋ ಕಳಿಸಿದ್ದ ದಿನ ಬಿಡುಗಡೆ ಆಗಿಲ್ಲ. ಮಾ.13ರಂದು ರಮೇಶ್ ಜಾರಕಿಹೊಳಿರಿಂದ ದೂರು ನೀಡಿದ ಬಳಿಕ ವಿಡಿಯೋ ರಿಲೀಸ್ ಆಗಿದೆ. ದೂರು ನೀಡಿದ ಅರ್ಧ ಗಂಟೆ ಬಳಿಕ ವಿಡಿಯೋ ರಿಲೀಸ್ ಆಗಿದೆ. ಹೀಗಾಗಿ ಇಲ್ಲಿ ಏನಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಎಸ್‌ಐಟಿ ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ. ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎಂದು ನಮ್ಮ ಪೋಷಕರಿಗೆ ಗೊತ್ತು. ಹೀಗಾಗಿ ಅವರು ದೂರು ನೀಡಿರುವುದಕ್ಕೆ ಸಾಧ್ಯವಿಲ್ಲ. ನನಗೆ ಯಾವತ್ತಿದ್ರೂ ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದು ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ

Published On - 11:56 am, Thu, 25 March 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ