AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್​ಐಟಿ ರಚನೆಗೆ ಯುವತಿ ಪರ ವಕೀಲರ ಆಕ್ಷೇಪ

ನ್ಯಾಯಮೂರ್ತಿಗಳ ಸೂಚನೆಯ ಮೇರೆಗೆ ಸೌಮೇಂದು ಮುಖರ್ಜಿ ಅವರು ಎಸ್ಐಟಿ ತನಿಖೆ ಪರಿಶೀಲಿಸಿ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಎಸ್​ಐಟಿ ರಚನೆಗೆ ಯುವತಿ ಪರ ವಕೀಲರ ಆಕ್ಷೇಪ
ರಮೇಶ್ ಜಾರಕಿಹೊಳಿ
TV9 Web
| Edited By: |

Updated on: Nov 30, 2021 | 4:31 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (Special Investigative Team – SIT) ಸಲ್ಲಿಸಿರುವ ತನಿಖಾ ವರದಿಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಒಪ್ಪಿಗೆ ನೀಡಿದ್ದಾರೆ ಎಂದು ಹೈಕೋರ್ಟ್‌ಗೆ ಎಸ್ಐಟಿ ಪರ ವಕೀಲ ಪ್ರಸನ್ನಕುಮಾರ್ ಹೇಳಿದರು. ನ್ಯಾಯಮೂರ್ತಿಗಳ ಸೂಚನೆಯ ಮೇರೆಗೆ ಸೌಮೇಂದು ಮುಖರ್ಜಿ ಅವರು ಎಸ್ಐಟಿ ತನಿಖೆ ಪರಿಶೀಲಿಸಿ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರ ವರದಿಯನ್ನು ಹೈಕೋರ್ಟ್​ ಮಂಗಳವಾರ ಪರಿಶೀಲಿಸಿತು.

ಎಸ್​ಐಟಿ ತನಿಖಾ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದೇನೆ. ತನಿಖಾ ವರದಿ ಸಲ್ಲಿಕೆಗೆ ನನ್ನ ಸಮ್ಮತಿಯಿದೆ ಎಂದು ತಮ್ಮ ವರದಿಯಲ್ಲಿ ಸೌಮೇಂದು ಮುಖರ್ಜಿ ಉಲ್ಲೇಖಿಸಿದ್ದಾರೆ. ಹೀಗಾಗಿ ಅಂತಿಮ ವರದಿ ಸಲ್ಲಿಸಲು ತಕರಾರೇಕೆ? ಅಂತಿಮ ವರದಿಯಲ್ಲಿ ಸಮಸ್ಯೆ ಇದ್ದರೆ ಯುವತಿ ಪ್ರಶ್ನಿಸಲಿ. ಈಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Public Interest Litigation – PIL) ಬಾಕಿ ಇಡುತ್ತೇವೆ. ಯುವತಿ ಎತ್ತಿರುವ ಪ್ರಶ್ನೆಗಳನ್ನು ನಂತರ ಪರಿಶೀಲಿಸಬಹುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಯುವತಿ ಪರ ವಾದ ಮಂಡಿಸಿದ ವಕೀಲೆ ಇಂದಿರಾ ಜೈಸಿಂಗ್, ಎಸ್ಐಟಿ ಅಂತಿಮ ವರದಿ ಸಲ್ಲಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿದರು. ಸಚಿವರ ಮನವಿ ಮೇರೆಗೆ ಎಸ್ಐಟಿ ರಚಿಸಲಾಗಿದೆ. ಎಸ್​ಐಟಿ ರಚನೆಯೇ ದೋಷಪೂರಿತ ಎಂದು ವಾದಿಸಿದರು. ಸಚಿವರಾದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ನಾವು ಯಾರಿಗೂ ಕೇರ್ ಮಾಡುವುದಿಲ್ಲ ಎಂದು ಸಿಜೆ ರಿತುರಾಜ್ ಅವಸ್ತಿ ಪ್ರತಿಕ್ರಿಯಿಸಿದರು.

ಏನಿದು ಪ್ರಕರಣ? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವ ಎನಿಸಿದ್ದ ರಮೇಶ್ ಜಾರಕಿಹೊಳಿ ಉದ್ಯೋಗದ ಆಮಿಷವೊಡ್ಡಿ ಯುವತಿಯೊಬ್ಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂಬ ಆರೋಪ ಪ್ರಬಲವಾಗಿ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದ ಸಿಡಿಯೊಂದು ಬಹಿರಂಗಗೊಂಡು ಸದ್ದು ಮಾಡಿತ್ತು. ಆರಂಭದಲ್ಲಿ ತಮ್ಮ ಮೇಲಿನ ಆರೋಪ ತಳ್ಳಿಹಾಕಿದ್ದ ರಮೇಶ್ ಜಾರಕಿಹೊಳಿ ನಂತರದ ದಿನಗಳಲ್ಲಿ ಇದು ಸಹಮತದ ಲೈಂಗಿಕ ಸಂಪರ್ಕ ಎಂದು ಒಪ್ಪಿಕೊಂಡಿದ್ದರು. ಇದೇ ಪ್ರಕರಣದ ಕಾರಣದಿಂದ ಅವರು ತಮ್ಮ ಸಚಿವ ಸ್ಥಾನವನ್ನೂ ಕಳೆದುಕೊಳ್ಳಬೇಕಾಯಿತು. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದ್ದ ಕರ್ನಾಟಕ ಸರ್ಕಾರವು ಸಮಗ್ರ ತನಿಖೆಗೆ ಆದೇಶಿಸಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಹೈಕೋರ್ಟ್​ನಿಂದ ಬೆಂಗಳೂರು ಪೊಲೀಸ್ ಕಮಿಷನರ್​ಗೆ ಬಿಗ್ ರಿಲೀಫ್ ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು