AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ

ಕಬ್ಬನ್​ಪಾರ್ಕ್ ಪೊಲೀಸರಿಗೆ 8ನೇ ಎಸಿಎಮ್ಎಮ್ ಕೋರ್ಟ್ ಈ ಬಗ್ಗೆ ಆದೇಶ ನೀಡಿದೆ. ಈ ಸಂಬಂಧ, ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 24, 2021 | 11:10 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ಸಲ್ಲಿಸಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಮ್.ಎನ್. ಅನುಚೇತ್, ಇನ್ಸ್​ಪೆಕ್ಟರ್ ಮಾರುತಿ ಬಿ ವಿರುದ್ಧ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಕಬ್ಬನ್​ಪಾರ್ಕ್ ಪೊಲೀಸರಿಗೆ 8ನೇ ಎಸಿಎಮ್ಎಮ್ ಕೋರ್ಟ್ ಈ ಬಗ್ಗೆ ಆದೇಶ ನೀಡಿದೆ. ಈ ಸಂಬಂಧ, ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಕಮಲ್ ಪಂತ್, ಎಂ.ಎನ್.ಅನುಚೇತ್, ಮಾರುತಿ ಬಿ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮತ್ತು ಸುಲಿಗೆ ಆರೋಪದ ಪ್ರತಿದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಈ ಹಿಂದೆ ಸೂಚಿಸಿತ್ತು.

ಈ ವರ್ಷದ ಆರಂಭದಲ್ಲಿ ಜುಲೈನಲ್ಲಿ ಎಸ್‌ಐಟಿ(SIT) ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ದೂರುಗಳ ತನಿಖೆಯ ವರದಿಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದಾಗ ಅವುಗಳನ್ನು ಕೆಳ ಅಥವಾ ಅಧೀನ ನ್ಯಾಯಾಲಯದಲ್ಲಿ ಸಲ್ಲಿಸಲು ಅನುಮತಿ ಕೋರಿತ್ತು. ವೈಯಕ್ತಿಕ ಕಾರಣಗಳಿಂದಾಗಿ ಮೇ ಯಿಂದ ಜುಲೈ ವರೆಗೆ ತನಿಖೆಯ ಪ್ರಮುಖ ಭಾಗಕ್ಕೆ ರಜೆಯ ಮೇಲೆ ಎಸ್‌ಐಟಿ ಮುಖ್ಯಸ್ಥರು ಗೈರಾಗಿದ್ದಾರೆ. ಹೀಗಾಗಿ ಈ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ತನಿಖಾ ವರದಿ ಪರಿಶೀಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು; ಆಪ್ತರ ಆಗ್ರಹ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ