AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ

ಕಬ್ಬನ್​ಪಾರ್ಕ್ ಪೊಲೀಸರಿಗೆ 8ನೇ ಎಸಿಎಮ್ಎಮ್ ಕೋರ್ಟ್ ಈ ಬಗ್ಗೆ ಆದೇಶ ನೀಡಿದೆ. ಈ ಸಂಬಂಧ, ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ದೂರು ಆಧರಿಸಿ ಕೇಸ್ ದಾಖಲಿಸದ ಹಿನ್ನೆಲೆ; ಪೊಲೀಸರ ವಿರುದ್ಧ ತನಿಖೆಗೆ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 24, 2021 | 11:10 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ಸಲ್ಲಿಸಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಮ್.ಎನ್. ಅನುಚೇತ್, ಇನ್ಸ್​ಪೆಕ್ಟರ್ ಮಾರುತಿ ಬಿ ವಿರುದ್ಧ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಕಬ್ಬನ್​ಪಾರ್ಕ್ ಪೊಲೀಸರಿಗೆ 8ನೇ ಎಸಿಎಮ್ಎಮ್ ಕೋರ್ಟ್ ಈ ಬಗ್ಗೆ ಆದೇಶ ನೀಡಿದೆ. ಈ ಸಂಬಂಧ, ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಕಮಲ್ ಪಂತ್, ಎಂ.ಎನ್.ಅನುಚೇತ್, ಮಾರುತಿ ಬಿ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮತ್ತು ಸುಲಿಗೆ ಆರೋಪದ ಪ್ರತಿದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಈ ಹಿಂದೆ ಸೂಚಿಸಿತ್ತು.

ಈ ವರ್ಷದ ಆರಂಭದಲ್ಲಿ ಜುಲೈನಲ್ಲಿ ಎಸ್‌ಐಟಿ(SIT) ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ದೂರುಗಳ ತನಿಖೆಯ ವರದಿಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದಾಗ ಅವುಗಳನ್ನು ಕೆಳ ಅಥವಾ ಅಧೀನ ನ್ಯಾಯಾಲಯದಲ್ಲಿ ಸಲ್ಲಿಸಲು ಅನುಮತಿ ಕೋರಿತ್ತು. ವೈಯಕ್ತಿಕ ಕಾರಣಗಳಿಂದಾಗಿ ಮೇ ಯಿಂದ ಜುಲೈ ವರೆಗೆ ತನಿಖೆಯ ಪ್ರಮುಖ ಭಾಗಕ್ಕೆ ರಜೆಯ ಮೇಲೆ ಎಸ್‌ಐಟಿ ಮುಖ್ಯಸ್ಥರು ಗೈರಾಗಿದ್ದಾರೆ. ಹೀಗಾಗಿ ಈ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ತನಿಖಾ ವರದಿ ಪರಿಶೀಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು; ಆಪ್ತರ ಆಗ್ರಹ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?