AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಸ್ಫೋಟ: ಐದು ದಿನ ಕಳೆದರೂ ಸಿಕ್ಕಿಲ್ಲ ಆರೋಪಿಯ ಸುಳಿವು, ಪತ್ತೆಗೆ ಮ್ಯಾಪಿಂಗ್ ಮೊರೆ ಹೋದ ಪೊಲೀಸರು

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯ ಸುಳಿವು ಇನ್ನೂ ಪತ್ತೆ ಆಗದಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇದೀಗ ಮ್ಯಾಪಿಂಗ್ ಮೊರೆ ಹೋಗಿದ್ದಾರೆ. ಈ ವಿಧಾನದ ಮೂಲಕ ಆರೋಪಿಯ ಸುಳಿವು ಪತ್ತೆ ಹಚ್ಚುವುದು ಹೇಗೆ? ಇದಕ್ಕಾಗಿ ಪೊಲೀಸರು ಏನೇನು ಮಾಡುತ್ತಾರೆ? ಇಲ್ಲಿದೆ ನೋಡಿ ಮಾಹಿತಿ.

ರಾಮೇಶ್ವರಂ ಕೆಫೆ ಸ್ಫೋಟ: ಐದು ದಿನ ಕಳೆದರೂ ಸಿಕ್ಕಿಲ್ಲ ಆರೋಪಿಯ ಸುಳಿವು, ಪತ್ತೆಗೆ ಮ್ಯಾಪಿಂಗ್ ಮೊರೆ ಹೋದ ಪೊಲೀಸರು
ಶಂಕಿತನ ಸಿಸಿಟಿವಿ ದೃಶ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Mar 06, 2024 | 8:05 AM

Share

ಬೆಂಗಳೂರು, ಮಾರ್ಚ್ 6: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟ (Bomb Blast) ಸಂಭವಿಸಿ ಐದು ದಿನ ಕಳೆದರೂ ಇನ್ನೂ ಆರೋಪಿಯ ಸುಳಿವು ಸಿಕ್ಕಿಲ್ಲ. ಆರೋಪಿಯ ಸುಳಿವು ಬೆನ್ನತ್ತಿ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ (CCB Investigation) ನಡೆಸುತ್ತಿದೆ. ಆರೋಪಿಯ ಪತ್ತೆಗೆ ಮ್ಯಾಪಿಂಗ್ ಸಹ ನಡೆಸಲಾಗಿದೆ. ಆರೋಪಿ ಬಂದು, ಹೋದ ಮಾರ್ಗಗಳಲ್ಲಿ ಹಾಗೂ ಸುತ್ತಮುತ್ತಲಿನ ಏರಿಯಾಗಳಲ್ಲಿ ಮ್ಯಾಪಿಂಗ್ ನಡೆಸಲಾಗುತ್ತಿದೆ.

ಆರೋಪಿ ಎಲ್ಲಿಂದ ಪ್ರಯಾಣ ಶುರು ಮಾಡಿದ್ದ? ಅಥವಾ ಎಲ್ಲಿ ಪ್ರಯಾಣ ಕೊನೆಗೊಳಿಸಿದ್ದಾನೆ ಎಂದು ಶೋಧಿಸಲಾಗುತ್ತಿದೆ. ಯಾವುದಾದರೂ ಒಂದು ಮಾರ್ಗದಲ್ಲಿ ಸುಳಿವು ಸಿಕ್ಕಿದರೂ ಆರೋಪಿ ಪತ್ತೆಗೆ ಅನುಕೂಲವಾಗಲಿದೆ. ಮುಖ ಕಾಣದಂತೆ ಆರೋಪಿ ಎಲ್ಲೆಡೆ ಎಚ್ಚರವಹಿಸಿರುವುದು ತಿಳಿದುಬಂದಿದೆ. ಎಲ್ಲೂ ಕೂಡ ತನ್ನ ಸಂಪೂರ್ಣ ಮುಖ ಕಾಣದಂತೆ ಆರೋಪಿ ಓಡಾಡಿದ್ದಾನೆ. ಪರಿಶೀಲನೆ ನಡೆಸಿದ ಎಲ್ಲ ಸಿಸಿಟಿವಿ ದೃಶ್ಯಗಳಲ್ಲಿ ಕೂಡ ಅಲ್ಪ ಸ್ವಲ್ಪ ಅಷ್ಟೇ ಮುಖ ಕಾಣುತ್ತಿದೆ. ಎಲ್ಲಾದರೂ ಒಂದು ಕಡೆ ಸಂಪೂರ್ಣ ಮುಖ ಕಾಣಿಸುತ್ತದೆಯೇ ಎಂದು ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಹೀಗಾಗಿ ಪೊಲೀಸರು ಎರಡು ರೀತಿಯ ಮ್ಯಾಪಿಂಗ್ ನಡೆಸಿದ್ದಾರೆ. ಒಂದು ರಿವರ್ಸ್ ಮ್ಯಾಪಿಂಗ್, ಇನ್ನೊಂದು ಪಾರ್ವಡ್ ಮ್ಯಾಪಿಂಗ್. ಘಟನೆಗೂ ಮುನ್ನ ಆರೋಪಿ ಯಾವ ಮಾರ್ಗದಲ್ಲಿ, ಹೇಗೆ ಬಂದ? ಘಟನೆ ನಂತರ ಯಾವ ಮಾರ್ಗದಲ್ಲಿ ಹೇಗೆ ಹೋದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಮೂರ್ನಾಲ್ಕು ಕಿಮೀ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳು, ಪ್ರಮುಖ ರಸ್ತೆಗಳನ್ನ ಕೂಡುವ ಸಣ್ಣ ರಸ್ತೆಗಳು, ಏರಿಯಾ ರಸ್ತೆಗಳ ಕುರಿತ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ. ಸಿಸಿಟಿವಿಗಳ ಪರಿಶೀಲನೆ ನಡೆಸಿ ರಸ್ತೆಗಳ ಉದ್ದಕ್ಕೂ ಶೋಧ ನಡೆಸಲಾಗುತ್ತಿದೆ.

ಈ ಮಧ್ಯೆ, ಮಂಗಳವಾ ರಾಷ್ಟ್ರೀಯ ತನಿಖಾ ದಳ ಘಟನೆಯ ತನಿಖೆಯ ಹೊಣೆಯನ್ನು ಅಧಿಕೃತವಾಗಿ ವಹಿಸಿಕೊಂಡಿದೆ. ಎನ್​ಐಎ ಅಧಿಕಾರಿಗಳು ರಾಮೇಶ್ವರಂ ಕೆಫೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಬಳಿ ಮಾಹಿತಿಯನ್ನೂ ಪಡೆದಿದ್ದಾರೆ. ಎನ್​ಐಎ ಕೂಡ ಆರೋಪಿಯ ಪತ್ತೆಗೆ ಬಲೆ ಬೀಸಲಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಬೇಟೆಗಾಗಿ ಪೊಲೀಸರ ತಲಾಶ್: ಶಂಕಿತನ ಮತ್ತೊಂದು ದೃಶ್ಯ ಲಭ್ಯ, ಇಲ್ಲಿದೆ ಪ್ರಕರಣದ ಸಮಗ್ರ ಮಾಹಿತಿ

ಮತ್ತೊಂದೆಡೆ, ಘಟನೆ ಸಂಭವಿಸಿ ವಾರವೇ ಸಮೀಪಿಸುತ್ತಾ ಬಂದರೂ ಆರೋಪಿಯ ಜಾಡು ಹಿಡಿಯಲು ಪೊಲೀಸರಿಗೆ ಸಾಧ್ಯವಾಗದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಷ್ಟೊಂದು ಗಂಭೀರ ಪ್ರಕರಣದಲ್ಲಿಯೂ, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಇನ್ನಿತರ ವ್ಯವಸ್ಥೆ ಗಳಿದ್ದರೂ ದೇಶದ ಭದ್ರತೆಗೆ ಸಂಬಂಧಿಸಿದ ಅಹಿತಕರ ಘಟನೆ ಸಂಭವಿಸಿದಾಗ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲು ಇಷ್ಟೊಂದು ಸಮಯ ಬೇಕೇ ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ