AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಸ್ಫೋಟ ಪರಿಣಾಮ: ಬೆಂಗಳೂರಿನ ಹೋಟೆಲ್​​ಗಳಲ್ಲಿ ಜಾರಿಯಾಗಲಿವೆ ಕಠಿಣ ಭದ್ರತಾ ನಿಯಮಗಳು, ಇಲ್ಲಿದೆ ವಿವರ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ಬೆಂಗಳೂರಿನ ಹೋಟೆಲ್​ಗಳಲ್ಲಿ ಕಠಿಣ ಭದ್ರತಾ ನಿಯಮಗಳು ಜಾರಿಗೆ ಬರುವ ಸಾಧ್ಯತೆ ಇದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಜಾರಿಗೊಳಿಸುವ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಭೆ ನಡೆಸಿದ್ದು, ಹಲವು ವಿಚಾರಗಳ ಚರ್ಚೆಯಾಗಿದೆ. ಆ ಕುರಿತು ಮಾಹಿತಿ ಇಲ್ಲಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪರಿಣಾಮ: ಬೆಂಗಳೂರಿನ ಹೋಟೆಲ್​​ಗಳಲ್ಲಿ ಜಾರಿಯಾಗಲಿವೆ ಕಠಿಣ ಭದ್ರತಾ ನಿಯಮಗಳು, ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: Ganapathi Sharma

Updated on: Mar 04, 2024 | 2:40 PM

ಬೆಂಗಳೂರು, ಮಾರ್ಚ್​​ 4: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಫೋಟ (Bomb Blast) ಪ್ರಕರಣದ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Bengaluru Hotel Assosiation) ಅಲರ್ಟ್ ಆಗಿದೆ. ನಗರದ ಹೋಟೆಲ್​​ಗಳಲ್ಲಿ ಭದ್ರತೆ ವಿಚಾರವಾಗಿ ಕಟ್ಟೆಚ್ಚರ ವಹಿಸಲು ಹೋಟೆಲ್ ಮಾಲೀಕರು ಮುಂದಾಗಿದ್ದಾರೆ. ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್ ನೇತೃತ್ವದಲ್ಲಿ ಅಸೋಸಿಯೇಷನ್ ಸಭೆ ಸೇರಿದ್ದು, ಇದೇ ಮೊದಲ ಬಾರಿಗೆ ಹೋಟೆಲ್​ಗಳಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.

ಹೋಟೆಲ್ ತಜ್ಞರು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಜಾರಿಗೊಳಿಸುವ ಸಂಬಂಧ ಹೋಟೆಲ್ ಗಳಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಒಂದು ವೇಳೆ ಇದು ಜಾರಿಯಾಗಿದ್ದೇ ಆದರೆ ಇನ್ಮುಂದೆ ಹೋಟೆಲ್​​ಗಳಲ್ಲಿಯೂ ಕಠಿಣ ಭದ್ರತಾ ನಿಯಮಗಳು ಅನ್ವಯವಾಗಲಿವೆ. ಬೇರೆ ರಾಜ್ಯಗಳಲ್ಲಿರುವ ಭದ್ರತಾ ಕ್ರಮಗಳನ್ನು ಅನುಸರಿಸಲು ಕೂಡ ಚಿಂತನೆ ಮಾಡಲಾಗಿದೆ.

ಹೋಟೆಲ್​​ಗಳಲ್ಲಿ ಯಾವೆಲ್ಲ ನಿಮಯ ಜಾರಿಗೆ ಬರಲಿದೆ?

  • ಹೋಟೆಲ್​​ಗಳಲ್ಲಿ ಸೈರನ್ ಅಳವಡಿಸುವುದು
  • ಮೈಕ್ ವಾಕ್ ಟಾಕಿ ಅಳವಡಿಸುವುದು
  • ಪೈರಿಸ್ಟಿಂಗ್ ಮಿಷನ್ ಅಳವಡಿಸಿಸುವುದು
  • ಪೋಲಿಸ್ ನಂಬರ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಯ ನಂಬರ್ ನೋಟಿಸ್ ಬೋರ್ಡ್​ಮೇಲೆ ಹಾಕುವುದು
  • ಮೆಟಲ್ ಸ್ಕ್ರೀನಿಂಗ್ ಅಳವಡಿಸುವುದು
  • ಅನುಮಾನ್ಪದ ಗ್ರಾಹಕರನ್ನು ವಾಚಿಂಗ್ ಮಾಡಲು ಸ್ಪೇಷಲ್ ಸಿಬ್ಬಂದಿಗಳನ್ನ ನೇಮಿಸುವುದು
  • ಹೈ ಟೆಕ್ನಿಕ್ ಸಿಸಿಟಿವಿ ಕ್ಯಾಮರಗಳ ಅಳವಡಿಕೆ ಹೆಚ್ಚಿಸುವುದು
  • ಹೋಟೆಲ್​ಗಳಲ್ಲಿಯೂ ಪೊಲೀಸ್ ಮಾರ್ಗಸೂಚಿ ಅನುಸರಿಸುವುದು
  • ಬ್ಯಾಗ್​​ಗಳನ್ನ ಹೊರಗಿಟ್ಟು ಗ್ರಾಹಕರು ಒಳಗೆ ಬರುವಂತೆ ನಿಯಮ ರೂಪಿಸಿವುದು

ಇಷ್ಟೇ ಅಲ್ಲದೆ, ಭದ್ರತೆ ಹಾಗೂ ಗ್ರಾಹಕರ ಸುರಕ್ಷತಾ ದೃಷ್ಟಿಯಿಂದ ಇನ್ನೂ ಹಲವು ಕ್ರಮಗಳನ್ನು ಕೈಗೊಳ್ಳಲು ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ. ಸಣ್ಣಪುಟ್ಟ ಹೋಟೆಲ್​​ಗಳಿಗೆ ಹೊರೆಯಾಗದಂತೆ ನಿಯಮವಳಿಗಳನ್ನು ಜಾರಿಗೊಳಿಸಲಾಗುವುದು ಎಂದು ಪಿಸಿ ರಾವ್ ತಿಳಿಸಿದ್ದಾರೆ. ಆದರೆ, ಕಡ್ಡಾಯವಾಗಿ ಪ್ರತಿಯೊಂದು ಹೋಟೆಲ್‌ಗಳು ಸಿಸಿಟಿವಿ ಕ್ಯಾಮರಾ ಅಳವಡಿಕೆ‌ ಮಾಡಲೇಬೇಕು ಎಂದು ಅಸೋಸಿಯೇಷನ್ ಹೇಳಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್‌ ಬೇಟೆಗಾಗಿ ಪೊಲೀಸರ ತಲಾಶ್: ಶಂಕಿತನ ಮತ್ತೊಂದು ದೃಶ್ಯ ಲಭ್ಯ, ಇಲ್ಲಿದೆ ಪ್ರಕರಣದ ಸಮಗ್ರ ಮಾಹಿತಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1ರಂದು ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ನಂತರ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇದೀಗ ದಾಳಿ ಭೀತಿಯಿಂದ ಇತರ ಹೋಟೆಲ್​ಗಳು ಸಹ ಭದ್ರತಾ ನಿಯಮಗಳನ್ನು ಬಿಗಿಗೊಳಿಸಲು ಮುಂದಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್