AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ರಿಲೀಸ್​ ಮಾಡಿದ ಎನ್​ಐಎ

ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಈಗಾಗಲೇ ಎನ್‌ಐಎ ಘೋಷಿಸಿತ್ತು. ಇದೀಗ ಆರೋಪಿ ಪತ್ತೆಗೆ ನೆರವಾಗಲೆಂದು ಬಾಂಬರ್​ನ ಓಡಾಟದ ಮತ್ತೆರಡು ವಿಡಿಯೋವನ್ನ ಎನ್​ಐಎ(NIA) ರಿಲೀಸ್​ ಮಾಡಿದೆ.

ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 08, 2024 | 6:48 PM

Share

ಬೆಂಗಳೂರು, ಮಾ.08: ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಈಗಾಗಲೇ ಎನ್‌ಐಎ ಘೋಷಿಸಿತ್ತು. ಇದೀಗ ಆರೋಪಿ ಪತ್ತೆಗೆ ನೆರವಾಗಲೆಂದು ಬಾಂಬರ್​ನ ಓಡಾಟದ ಮತ್ತೆರಡು ವಿಡಿಯೋವನ್ನ ಎನ್​ಐಎ(NIA) ರಿಲೀಸ್​ ಮಾಡಿದ್ದು, ಆರೋಪಿ ಬಿಎಂಟಿಸಿ ಬಸ್​ನಲ್ಲಿ ಹತ್ತಿರುವ ಮತ್ತು ಬಸ್​ ನಿಲ್ದಾಣವೊಂದರಲ್ಲಿ ಓಡಾಡಿರುವ ವಿಡಿಯೋವನ್ನ ಬಿಡುಗಡೆ ಮಾಡಿದೆ.

ವಿಡಿಯೋ 1

 ಬಿಎಂಟಿಸಿ ಬಸ್​ನಲ್ಲಿ ಓಡಾಡಿದ ಬಾಂಬರ್​

ಬಿಎಂಟಿಸಿ ಬಸ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಆರೋಪಿ ಬಾಂಬರ್​ನ ಚಿತ್ರ ಸೆರೆಯಾಗಿದ್ದು, ಪೊಲೀಸರು ವಿಡಿಯೋವನ್ನು ವಿಶ್ಲೇಷಿಸುತ್ತಿದ್ದಾರೆ. ಆರೋಪಿಯು ಮಾಸ್ಕ್ ಇಲ್ಲದೆ ಬಸ್ಸಿನೊಳಗೆ ಕುಳಿತಿರುವುದು ಕೂಡ ಕಂಡುಬಂದಿದೆ.

ವಿಡಿಯೋ 2

ಬಳ್ಳಾರಿ ಬಸ್​ ನಿಲ್ದಾಣದಲ್ಲಿ ಓಡಾಡಿದ ಬಾಂಬರ್​

ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಬಳ್ಳಾರಿಯಲ್ಲಿ ಶಂಕಿತ ಬಾಂಬರ್​ಗಾಗಿ ಹುಡುಕಾಟ ನಡೆಸಿರುವ ಎನ್ಐಎ ಅಧಿಕಾರಿಗಳು

ಇನ್ನು ಗುರುವಾರ ಬೆಂಗಳೂರಿನ ರಾಮೇಶ್ವರಂ ಕೆಫೆ  ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತನ ಮಹತ್ವದ ಸುಳಿವು ಪತ್ತೆಯಾಗಿತ್ತು. ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಮಾರ್ಚ 1 ನೇ ತಾರೀಖು ರಾತ್ರಿ ಒಂಬತ್ತು ಗಂಟೆಗೆ ಬಸ್ ನಿಲ್ದಾಣದಲ್ಲಿ ಓಡಾಡಿರುವ ಬಾಂಬರ್, ಮುಖಕ್ಕೆ ಮಾಸ್ಕ್ ಹಾಕಿ, ಲೈಟ್ ಬ್ಲೂ ಕಲರ್ ಟಿ ಶರ್ಟ, ಬ್ಲಾಕ್ ಪ್ಯಾಂಟ್ ಹಾಕಿಕೊಂಡು ಓಡಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Fri, 8 March 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ