AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ರಿಲೀಸ್​ ಮಾಡಿದ ಎನ್​ಐಎ

ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಈಗಾಗಲೇ ಎನ್‌ಐಎ ಘೋಷಿಸಿತ್ತು. ಇದೀಗ ಆರೋಪಿ ಪತ್ತೆಗೆ ನೆರವಾಗಲೆಂದು ಬಾಂಬರ್​ನ ಓಡಾಟದ ಮತ್ತೆರಡು ವಿಡಿಯೋವನ್ನ ಎನ್​ಐಎ(NIA) ರಿಲೀಸ್​ ಮಾಡಿದೆ.

ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 08, 2024 | 6:48 PM

Share

ಬೆಂಗಳೂರು, ಮಾ.08: ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಈಗಾಗಲೇ ಎನ್‌ಐಎ ಘೋಷಿಸಿತ್ತು. ಇದೀಗ ಆರೋಪಿ ಪತ್ತೆಗೆ ನೆರವಾಗಲೆಂದು ಬಾಂಬರ್​ನ ಓಡಾಟದ ಮತ್ತೆರಡು ವಿಡಿಯೋವನ್ನ ಎನ್​ಐಎ(NIA) ರಿಲೀಸ್​ ಮಾಡಿದ್ದು, ಆರೋಪಿ ಬಿಎಂಟಿಸಿ ಬಸ್​ನಲ್ಲಿ ಹತ್ತಿರುವ ಮತ್ತು ಬಸ್​ ನಿಲ್ದಾಣವೊಂದರಲ್ಲಿ ಓಡಾಡಿರುವ ವಿಡಿಯೋವನ್ನ ಬಿಡುಗಡೆ ಮಾಡಿದೆ.

ವಿಡಿಯೋ 1

 ಬಿಎಂಟಿಸಿ ಬಸ್​ನಲ್ಲಿ ಓಡಾಡಿದ ಬಾಂಬರ್​

ಬಿಎಂಟಿಸಿ ಬಸ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಆರೋಪಿ ಬಾಂಬರ್​ನ ಚಿತ್ರ ಸೆರೆಯಾಗಿದ್ದು, ಪೊಲೀಸರು ವಿಡಿಯೋವನ್ನು ವಿಶ್ಲೇಷಿಸುತ್ತಿದ್ದಾರೆ. ಆರೋಪಿಯು ಮಾಸ್ಕ್ ಇಲ್ಲದೆ ಬಸ್ಸಿನೊಳಗೆ ಕುಳಿತಿರುವುದು ಕೂಡ ಕಂಡುಬಂದಿದೆ.

ವಿಡಿಯೋ 2

ಬಳ್ಳಾರಿ ಬಸ್​ ನಿಲ್ದಾಣದಲ್ಲಿ ಓಡಾಡಿದ ಬಾಂಬರ್​

ಇದನ್ನೂ ಓದಿ:ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಬಳ್ಳಾರಿಯಲ್ಲಿ ಶಂಕಿತ ಬಾಂಬರ್​ಗಾಗಿ ಹುಡುಕಾಟ ನಡೆಸಿರುವ ಎನ್ಐಎ ಅಧಿಕಾರಿಗಳು

ಇನ್ನು ಗುರುವಾರ ಬೆಂಗಳೂರಿನ ರಾಮೇಶ್ವರಂ ಕೆಫೆ  ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತನ ಮಹತ್ವದ ಸುಳಿವು ಪತ್ತೆಯಾಗಿತ್ತು. ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಮಾರ್ಚ 1 ನೇ ತಾರೀಖು ರಾತ್ರಿ ಒಂಬತ್ತು ಗಂಟೆಗೆ ಬಸ್ ನಿಲ್ದಾಣದಲ್ಲಿ ಓಡಾಡಿರುವ ಬಾಂಬರ್, ಮುಖಕ್ಕೆ ಮಾಸ್ಕ್ ಹಾಕಿ, ಲೈಟ್ ಬ್ಲೂ ಕಲರ್ ಟಿ ಶರ್ಟ, ಬ್ಲಾಕ್ ಪ್ಯಾಂಟ್ ಹಾಕಿಕೊಂಡು ಓಡಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Fri, 8 March 24

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ