AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್

ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್
ರಾಮೇಶ್ವರಂ ಕೆಫೆ ಸ್ಫೋಟ ಕೇಸ್​; ತಮಿಳುನಾಡಿನಿಂದ ಬಂದು ಬಾಂಬ್​ ಇಟ್ಟ ಶಂಕಿತ
Jagadisha B
| Edited By: |

Updated on: Mar 23, 2024 | 7:05 AM

Share

ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಇನ್ನೂ ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್​​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್​​ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್​ಐಎ ಅಧಿಕಾರಿಗಳು ಡಿಎನ್​​ಎ ಟೆಸ್ಟ್​ಗೆ ನೀಡಿದ್ದಾರೆ.

ಹಾಗಾದರೇ ಶಂಕಿತರಿಗೂ ತಮಿಳುನಾಡಿಗೂ ಏನು ಲಿಂಕ್?

ಇನ್ನು ಎನ್ಐಎ ತನಿಖೆ ವೇಳೆ ಆ ಇಬ್ಬರು ಕರ್ನಾಟಕದವರೆಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅವರು ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್​​ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹಾಗಾದರೆ ಶಂಕಿತರಿಗೂ ತಮಿಳುನಾಡಿಗೂ ಏನು ಸಂಬಂಧ ಎಂಬ ಬಗ್ಗೆ ತನಿಖೆ ಶುರುವಾಗಿದ್ದು, ಸದ್ಯ ಸಿಸಿಟಿವಿಗಳ ಆಧರಿಸಿ ಆರೋಪಿಗಳ ಜಾಲ ಪತ್ತೆ ಹಚ್ಚಲಾಗುತ್ತಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್​ಐಎ

ಇನ್ನು ಮಾರ್ಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮಾ.13 ರಂದು ಎನ್​ಐಎ ತಂಡ ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದರು. ಶಬ್ಬೀರ್ ಎಂಬಾತನನ್ನು ಎನ್​ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದರು. ಜೊತೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಎನ್​ಐಎಗೆ ಇದೀಗ ಮಹತ್ವದ ಸುಳಿವು ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್