AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್

ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್
ರಾಮೇಶ್ವರಂ ಕೆಫೆ ಸ್ಫೋಟ ಕೇಸ್​; ತಮಿಳುನಾಡಿನಿಂದ ಬಂದು ಬಾಂಬ್​ ಇಟ್ಟ ಶಂಕಿತ
Jagadisha B
| Edited By: |

Updated on: Mar 23, 2024 | 7:05 AM

Share

ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಇನ್ನೂ ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್​​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್​​ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್​ಐಎ ಅಧಿಕಾರಿಗಳು ಡಿಎನ್​​ಎ ಟೆಸ್ಟ್​ಗೆ ನೀಡಿದ್ದಾರೆ.

ಹಾಗಾದರೇ ಶಂಕಿತರಿಗೂ ತಮಿಳುನಾಡಿಗೂ ಏನು ಲಿಂಕ್?

ಇನ್ನು ಎನ್ಐಎ ತನಿಖೆ ವೇಳೆ ಆ ಇಬ್ಬರು ಕರ್ನಾಟಕದವರೆಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅವರು ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್​​ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹಾಗಾದರೆ ಶಂಕಿತರಿಗೂ ತಮಿಳುನಾಡಿಗೂ ಏನು ಸಂಬಂಧ ಎಂಬ ಬಗ್ಗೆ ತನಿಖೆ ಶುರುವಾಗಿದ್ದು, ಸದ್ಯ ಸಿಸಿಟಿವಿಗಳ ಆಧರಿಸಿ ಆರೋಪಿಗಳ ಜಾಲ ಪತ್ತೆ ಹಚ್ಚಲಾಗುತ್ತಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್​ಐಎ

ಇನ್ನು ಮಾರ್ಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮಾ.13 ರಂದು ಎನ್​ಐಎ ತಂಡ ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದರು. ಶಬ್ಬೀರ್ ಎಂಬಾತನನ್ನು ಎನ್​ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದರು. ಜೊತೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಎನ್​ಐಎಗೆ ಇದೀಗ ಮಹತ್ವದ ಸುಳಿವು ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್