AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್

ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ಶಂಕಿತನ ಜಾಡು ಹಿಡಿದ ಎನ್​ಐಎಗೆ ಸಿಕ್ಕಿತು ಚೆನ್ನೈ ಲಿಂಕ್
ರಾಮೇಶ್ವರಂ ಕೆಫೆ ಸ್ಫೋಟ ಕೇಸ್​; ತಮಿಳುನಾಡಿನಿಂದ ಬಂದು ಬಾಂಬ್​ ಇಟ್ಟ ಶಂಕಿತ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 23, 2024 | 7:05 AM

Share

ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಇನ್ನೂ ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್​​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್​​ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್​ಐಎ ಅಧಿಕಾರಿಗಳು ಡಿಎನ್​​ಎ ಟೆಸ್ಟ್​ಗೆ ನೀಡಿದ್ದಾರೆ.

ಹಾಗಾದರೇ ಶಂಕಿತರಿಗೂ ತಮಿಳುನಾಡಿಗೂ ಏನು ಲಿಂಕ್?

ಇನ್ನು ಎನ್ಐಎ ತನಿಖೆ ವೇಳೆ ಆ ಇಬ್ಬರು ಕರ್ನಾಟಕದವರೆಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅವರು ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್​​ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹಾಗಾದರೆ ಶಂಕಿತರಿಗೂ ತಮಿಳುನಾಡಿಗೂ ಏನು ಸಂಬಂಧ ಎಂಬ ಬಗ್ಗೆ ತನಿಖೆ ಶುರುವಾಗಿದ್ದು, ಸದ್ಯ ಸಿಸಿಟಿವಿಗಳ ಆಧರಿಸಿ ಆರೋಪಿಗಳ ಜಾಲ ಪತ್ತೆ ಹಚ್ಚಲಾಗುತ್ತಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್​ಐಎ

ಇನ್ನು ಮಾರ್ಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮಾ.13 ರಂದು ಎನ್​ಐಎ ತಂಡ ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದರು. ಶಬ್ಬೀರ್ ಎಂಬಾತನನ್ನು ಎನ್​ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದರು. ಜೊತೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಎನ್​ಐಎಗೆ ಇದೀಗ ಮಹತ್ವದ ಸುಳಿವು ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ