AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ಬದಲಿ ನಿವೇಶನ ಆರೋಪ: ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿಗೆ ರಣದೀಪ್ ಸುರ್ಜೆವಾಲಾ ಪ್ರಶ್ನೆ

ಬೊಮ್ಮಾಯಿಯವರೇ ನೀವು ಈಗ ಕಾರ್ಯನಿರ್ವಹಿಸ್ತೀರಾ? ಜಟಿಲವಾದ ಮೌನಕ್ಕೆ ಶರಣಾಗುತ್ತೀರಾ ಎಂದು ಸಿಎಂ ಬೊಮ್ಮಾಯಿಗೆ ಸುರ್ಜೇವಾಲ ಪ್ರಶ್ನೆ ಮಾಡಿದ್ದಾರೆ.

ಬಿಡಿಎ ಬದಲಿ ನಿವೇಶನ ಆರೋಪ: ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿಗೆ ರಣದೀಪ್ ಸುರ್ಜೆವಾಲಾ ಪ್ರಶ್ನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on:Nov 23, 2022 | 11:58 AM

Share

ಬೆಂಗಳೂರು: ಬಿಡಿಎ(BDA) ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ(Basavaraj Bommai) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ(Ranadeep Singh Surjewala) ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಬೊಮ್ಮಾಯಿಯವರೇ, ಸುಪ್ರೀಂಕೋರ್ಟ್​​ ಸಾರ್ವಜನಿಕ ಕಚೇರಿಯ ದುರುಪಯೋಗ ಮತ್ತು ಅಕ್ರಮ ಹಂಚಿಕೆಗಳನ್ನ ​ಕಂಡುಹಿಡಿದಿದೆ. ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ಶಾಸಕ ಚರಂತಿಮಠ, ಬಿಜೆಪಿ ಮಾಜಿ ಸಂಸದ ಬಿ.ಪಾಟೀಲ್ ಹಾಗೂ ಶಾಸಕ ಅಭಯ ಪಾಟೀಲ್​ ಸೇರಿ ಅನೇಕರ ಬಗ್ಗೆ ಆಕ್ಷೇಪಣೆ ಇದೆ. ಬೊಮ್ಮಾಯಿಯವರೇ ನೀವು ಈಗ ಕಾರ್ಯನಿರ್ವಹಿಸ್ತೀರಾ? ಜಟಿಲವಾದ ಮೌನಕ್ಕೆ ಶರಣಾಗುತ್ತೀರಾ ಎಂದು ಸಿಎಂ ಬೊಮ್ಮಾಯಿಗೆ ಸುರ್ಜೇವಾಲ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: Uttar Pradesh: ಆಗ್ರಾದ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟಡದ ಬೆಂಕಿ, 3 ಜನ ಸಾವು

ಜಿಹಾದ್ ಸಂಘಟನೆ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್

ಕಾಂಗ್ರೆಸ್‌ ಮತ್ತು ಜಿಹಾದಿ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರದ್ದೂ ಒಂದೇ ಧ್ಯೇಯ, ಅದು ದೇಶವನ್ನು ತುಂಡರಿಸುವುದು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಮುಂದುವರೆದರೆ, ಧಾರ್ಮಿಕತೆಯ ಹೆಸರಿನಲ್ಲಿ ಜಿಹಾದಿ ಸಂಘಟನೆಗಳು ಕಾರ್ಯಾಚರಿಸುತ್ತಿದ್ದವು. ದೇಶ ತುಂಡರಿಸಲು ಎಷ್ಟೊಂದು ಮುಖವಾಡಗಳು ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ದೇಶದಲ್ಲಿ ನಕಲಿ ಗಾಂಧಿ ಕುಟುಂಬ ಉಗ್ರವಾದವನ್ನು ಪೋಷಿಸಿದರೆ ರಾಜ್ಯದಲ್ಲಿ ಅದರ ನೇತೃತ್ವ ವಹಿಸಿಕೊಂಡಿದ್ದು ಸಿದ್ದರಾಮಯ್ಯ. ಸಮಾಜದಲ್ಲಿ ಅಸ್ಥಿರತೆ ಮೂಡಿಸಿ ತಮ್ಮ ವೈಯುಕ್ತಿಕ ಧಾರ್ಮಿಕ ಗುರಿಗಳನ್ನು ಹಿಂಸೆಯ ಮೂಲಕ ಪ್ರತಿಷ್ಠಾಪಿಸುವುದು ಈ ಜಿಹಾದಿಗಳ ಉದ್ದೇಶವಾಗಿತ್ತು. ಇಂತವರಿಗೂ ಕಾಂಗ್ರೆಸ್‌ ಬೆಂಬಲ ನೀಡುತ್ತಿರುವುದೇಕೆ? ಸಹಜ ದೇಶವಾಸಿಗಳ ಸೋಗಿನಲ್ಲಿ ದೇಶದಲ್ಲಿ ಆಂತರಿಕ ಭಯೋತ್ಪಾದನೆ ಸೃಷ್ಟಿಸುವ ಹುನ್ನಾರ ನಡೆಸಿದ ಜಿಹಾದಿ ಸಂತತಿಯ ಪಿಎಫ್‌ಐ ಸೇರಿದಂತೆ ಸಮಾಜ ಘಾತುಕ ಸಂಘಟನೆಗಳನ್ನು ಮೋದಿ ಸರ್ಕಾರ ನಿಷೇಧಿಸಿದೆ. ಜಿಹಾದಿ ಮನಸ್ಥಿತಿ ನೆಲೆಯೂರುವಲ್ಲಿ ಕಾಂಗ್ರೆಸ್ ಪಕ್ಷದ ಸಹಕಾರವಿದೆ. ಇವರ ಉಗ್ರ ಚಟುವಟಿಕೆಗೆ ಬೆನ್ನೆಲುಬಾಗಿ ನಿಂತಿದ್ದೇ ಕಾಂಗ್ರೆಸ್. ಇದು ಉಗ್ರ ಭಾಗ್ಯ ಎಂದು ಬಿಜೆಪಿ ವ್ಯಾಂಗ್ಯವಾಡಿದೆ. ಇದನ್ನೂ ಓದಿ: VIDEO: 1 ಎಸೆತದಲ್ಲಿ 3 ಬಾರಿ ಜೀವದಾನ ಪಡೆದ ಹರ್ಷಲ್ ಪಟೇಲ್..!

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:46 pm, Wed, 5 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ