AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ: ಶಾಸಕ ಜಮೀರ್ ಅಹ್ಮದ್ಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತರಾಟೆ

ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿದಾಯಕವಾಗುವಂತೆ ಶಿಸ್ತುಪಾಲನೆ ಕಾಪಾಡಬೇಕು. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಎತ್ತಿಹಿಡಿಯಬೇಕು ಎಂದು ಪತ್ರದ ಮೂಲಕ ಶಾಸಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ: ಶಾಸಕ ಜಮೀರ್ ಅಹ್ಮದ್ಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತರಾಟೆ
ಜಮೀರ್ ಅಹ್ಮದ್​ ಖಾನ್
TV9 Web
| Edited By: |

Updated on:Jul 25, 2022 | 9:10 PM

Share

ಬೆಂಗಳೂರು: ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ ಎಂದು ಜಮೀರ್ ಅಹ್ಮದ್​ ಖಾನ್​ಗೆ(Zameer Ahmed Khan) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Surjewala) ಎಚ್ಚರಿಕೆ ಪತ್ರ ಬರೆದಿದ್ದಾರೆ. ಸುದೀರ್ಘ ಪತ್ರದ ಮೂಲಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

ನಿಮ್ಮಂತ ಹಿರಿಯ ನಾಯಕರು ಪಕ್ಷದ ಲಕ್ಷ್ಮಣ ರೇಖೆಯೊಳೆಗೆ ಇರುವುದನ್ನ ಪಕ್ಷ ನೀರಿಕ್ಷೆ ಮಾಡಿತ್ತದೆ. ಅನಾವಶ್ಯಕ ಹೇಳಿಕೆಯು ವಿವಾದ ಹಾಗೂ ಕಹಿಯಾದ ವಾತಾವರಣ ಸೃಷ್ಟಿಸುತ್ತಿದೆ. ಭಾರತೀಯ ಕಾಂಗ್ರೆಸ್ ಪಕ್ಷ ನಿಮ್ಮಿಂದ ಇಂತಹ ಹೇಳಿಕೆಯನ್ನ ನಿರೀಕ್ಷೆ ಮಾಡುವುದಿಲ್ಲ. ನಿಮ್ಮ ಅನಾವಶ್ಯಕ ಹೇಳಿಕೆಯು ತಪ್ಪು ಸಂದೇಶ ಹಾಗೂ ಅಭಿಪ್ರಾಯವನ್ನ ಸೃಷ್ಟಿಸಿದೆ. ಎಲ್ಲ ಜಾತಿ, ಜನಾಂಗ, ಸಮೂಹವನ್ನ ಒಳಗೊಳ್ಳುವುದು ಕಾಂಗ್ರೆಸ್ ಪಕ್ಷ ಹುಟ್ಟಿನಿಂದ ಬಂದ ಸಿದ್ದಾಂತ. ಈ ಸಿದ್ದಾಂತದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ. ಈ ಮೂಲಕ ನಿಮಗೆ ನಾವು ತಿಳಿಯ ಬಯಸುವುದು ಎನೇಂದರೆ ಸಾರ್ಜಜನಿಕ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿದಾಯಕವಾಗುವಂತೆ ಶಿಸ್ತುಪಾಲನೆ ಕಾಪಾಡಬೇಕು. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಎತ್ತಿಹಿಡಿಯಬೇಕು ಎಂದು ಪತ್ರದ ಮೂಲಕ ಶಾಸಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

Randeep surjewala

ಯಾವುದೇ ಸಮುದಾಯದ ಬಗ್ಗೆ ನಾನು ಕೆಟ್ಟದಾಗಿ ಮಾತಾಡಿಲ್ಲ

ಎಐಸಿಸಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಯಾವುದೇ ಸಮುದಾಯದ ಬಗ್ಗೆ ನಾನು ಕೆಟ್ಟದಾಗಿ ಮಾತಾಡಿಲ್ಲ. ನಾನು ಒಕ್ಕಲಿಗರ ಅಭಿಮಾನಿ ಎಂದು ದಾವಣಗೆರೆಯಲ್ಲಿ ಶಾಸಕ ಜಮೀರ್ ಅಹ್ಮದ್‌ಖಾನ್‌ ಹೇಳಿದ್ದಾರೆ. ನಾನೇನು ತಪ್ಪು ಮಾತನಾಡಿಲ್ಲ ನನ್ನ ಗುರುಗಳು ಒಕ್ಕಲಿಗ ಸ್ವಾಮಿಜಿ. 2005ರಲ್ಲಿ ನನ್ನ ಗೆಲುವಿಗೆ ದೇವೆಗೌಡ್ರು ಕಾರಣ. ಯಾವ ಜಾತಿಯ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ ಎಂದರು.

Published On - 7:58 pm, Mon, 25 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?