Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ಗೋಲ್ಡ್​ ಸ್ಮಗ್ಲಿಂಗ್​ ಕೇಸ್​: ಉದ್ಯಮಿ ಪುತ್ರ ತರುಣ್ ರಾಜು ಬಂಧನ

ಡಿಆರ್​​ಐ ಅಧಿಕಾರಿಗಳು ನಟಿ ರನ್ಯಾ ರಾವ್ ಮತ್ತು ಉದ್ಯಮಿ ಪುತ್ರ ತರುಣ್ ರಾಜು ಅವರನ್ನ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಬ್ಬರೂ ವರ್ಷಗಳಿಂದ ಸ್ನೇಹಿತರಾಗಿದ್ದು, ತರುಣ್ ರಾಜು, ರನ್ಯಾ ರಾವ್ ಅವರಿಂದ ಚಿನ್ನ ತರಿಸಿಕೊಳ್ಳುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರು ಕೂಡ ಕೇಳಿಬರುತ್ತಿದೆ.

ರನ್ಯಾ ಗೋಲ್ಡ್​ ಸ್ಮಗ್ಲಿಂಗ್​ ಕೇಸ್​: ಉದ್ಯಮಿ ಪುತ್ರ ತರುಣ್ ರಾಜು ಬಂಧನ
ರನ್ಯಾ ಗೋಲ್ಡ್​ ಸ್ಮಗ್ಲಿಂಗ್​ ಕೇಸ್​: ಉದ್ಯಮಿ ಪುತ್ರ ತರುಣ್ ರಾಜು ಬಂಧನ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on: Mar 10, 2025 | 3:10 PM

ಬೆಂಗಳೂರು, ಮಾರ್ಚ್​​ 10: ನಟಿ ರನ್ಯಾ ರಾವ್ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣದ (Ranya Rao Gold Smuggling​ case) ರಹಸ್ಯ ಬಗೆದಷ್ಟು ಬಯಲಾಗುತ್ತಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ಮಾಹಿತಿಗಳು ರಿವೀಲ್ ಆಗುತ್ತಿದೆ. ಈ ಗೋಲ್ಡ್ ಸ್ಮಗ್ಲಿಂಗ್​ನಲ್ಲಿ ಸಚಿವರಿಬ್ಬರ ಕೈವಾಡ ಅಂತಾ ಬಿಜೆಪಿ ಬಾಂಬ್ ಹಾಕಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹೀಗಿರುವಾಗಲೇ ಡಿಆರ್​​ಐ (DRI) ಅಧಿಕಾರಿಗಳಿಂದ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಎಂಬುವವರನ್ನು ಬಂಧಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು.

ಇದನ್ನೂ ಓದಿ: ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಕರ್ನಾಟಕದ ಪ್ರಭಾವಿ ರಾಜಕಾರಣಿ ಹೆಸರು: ಯಾರವರು?

ಇದನ್ನೂ ಓದಿ
Image
ರನ್ಯಾ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ
Image
ರನ್ಯಾ ಹಿಂದಿದೆ ಸ್ಲಗ್ಲಿಂಗ್ ಸಿಂಡಿಕೇಟ್: ಬಗೆದಷ್ಟು ಹೊರಬರುತ್ತಿವೆ ರಹಸ್ಯ
Image
ರನ್ಯಾ ಚಿನ್ನ ಕಳ್ಳಸಾಗಣೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಪ್ರೊಟೊಕಾಲ್ ಬಿಗಿ

ರನ್ಯಾ ರಾವ್​ ಚಿನ್ನದ ಸ್ಮಗ್ಲಿಂಗ್ ಬಗ್ಗೆ ಡಿಆರ್​​ಐ ಕೋರ್ಟ್​ಗೆ ಇಂಚಿಂಚಾಗಿ ಮಾಹಿತಿ ನೀಡಿದೆ. ಬರೋಬ್ಬರಿ 12 ಕೋಟಿ 56 ಲಕ್ಷ ರೂ. ಮೌಲ್ಯದ ಚಿನ್ನ ಸ್ಮಗ್ಲಿಂಗ್ ಆಗಿದ್ದು, ಸ್ಮಗ್ಲಿಂಗ್​ ಕೇಸ್​​ನಲ್ಲಿ ರನ್ಯಾ ‘ಮಾಸ್ಟರ್​ ಮೈಂಡ್​’ ಎಂದು ಉಲ್ಲೇಖ ಮಾಡಲಾಗಿದೆ. ಟಿಶ್ಯೂ ಪೇಪರ್ ಆ್ಯಂಡ್​ ಬ್ಯಾಂಡೇಜ್​ ಬಳಸಿ ಚಿನ್ನ ಸಾಗಾಟ ಮಾಡಿದ್ದಾರೆ. ಚಿನ್ನ ಸಾಗಾಟ ಕೇಸ್​​ನಲ್ಲಿ ದೊಡ್ಡಮಟ್ಟದಲ್ಲಿ​ ಸದಸ್ಯರಿರುವ ಮಾಹಿತಿ ಇದೆ. ಚಿನ್ನದ ಪ್ರಕರಣದಲ್ಲಿ ಅನೇಕ ಜನ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಗೋಲ್ಡ್​ ಸ್ಮಗ್ಲಿಂಗ್​ ಕೇಸ್​ನಲ್ಲಿ ಪ್ರೊಟೋಕಾಲ್​ ಹೇಗೆ ದುರ್ಬಳಕೆ ಮಾಡಲಾಗಿದೆ ಅನ್ನೋದನ್ನ ತಿಳಿಯೋಕೆ ರನ್ಯಾ ಫೋನ್ ರಿಟ್ರೀವ್​ ಮಾಡಬೇಕಿದೆ ಅಂತ ಡಿಆರ್​ಐ ಮಾಹಿತಿ ನೀಡಿದ್ದಾರೆ.

ರನ್ಯಾ ಮೊಬೈಲ್ ನೋಡುತ್ತಿದ್ದಂತೆ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ರನ್ಯಾ ಫೋನ್​ನಲ್ಲಿ ರಾಜಕೀಯ ನಾಯಕರ ನಂಬರ್ ಪತ್ತೆ ಆಗಿದೆ. ಹಾಲಿ ಸಚಿವರು, ಮಾಜಿ ಸಚಿವರ ನಂಬರ್​​ಗಳು ಪತ್ತೆ ಆಗಿದ್ದು, ಕೆಲ ಪ್ರಮುಖ ವ್ಯಕ್ತಿಗಳೊಂದಿಗೆ ರನ್ಯಾ ನಿರಂತರ ಸಂಪರ್ಕದಲ್ಲಿದ್ರಂತೆ. ಇಷ್ಟೇ ಅಲ್ಲ, ಕೆಲ ಪೊಲೀಸ್ ಅಧಿಕಾರಿಗಳ ನಂಬರ್​ಗಳು ಕೂಡ ಪತ್ತೆ ಆಗಿವೆ. ಹೀಗಾಗಿ ರನ್ಯಾ ಕಾಲ್ ಡಿಟೇಲ್ಸ್ ಅನ್ನ ಡಿಆರ್​ಐ ತಂಡ ಕೆದಕುತ್ತಿದೆ.

ಇದನ್ನೂ ಓದಿ: ನಟಿ ರನ್ಯಾ ಹಿಂದಿದೆ ಗೋಲ್ಡ್ ಸ್ಲಗ್ಲಿಂಗ್ ಸಿಂಡಿಕೇಟ್: ಬಗೆದಷ್ಟು ಹೊರಬರುತ್ತಿವೆ ರಹಸ್ಯ

CDR ಪರಿಶೀಲನೆ ಮಾಡ್ತಿದ್ದು, ರನ್ಯಾ ಯಾರ ಯಾರ ಜೊತೆ ಮಾತನಾಡಿದ್ದಾರೆಂದು ಪರಿಶೀಲನೆ ಮಾಡ್ತಿದ್ದಾರೆ. ಇನ್ನೊಂದು ವಿಷಯ ಏನಂದರೆ ರನ್ಯಾ ಲ್ಯಾಪ್​​ಟಾಪ್​ನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಮಾಹಿತಿ ಇದೆ. ಹೀಗಾಗಿ ಡಿಜಿಟಲ್ ಸಾಕ್ಷ್ಯದ ಬಗ್ಗೆ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!