AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ದಾರಿ ತಪ್ಪಿಸಲು ಯತ್ನಿಸಿದ ಅತ್ಯಾಚಾರ ಆರೋಪಿ ಕಾನ್​ಸ್ಟೇಬಲ್; ಮತ್ತೆ ಜಾಮೀನು ರುದ್ದು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪ ಸಂಬಂಧ ಮಹದೇವಪುರ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ನ್ಯಾಯಾಲಯದ ದಾರಿ ತಪ್ಪಿಸಿದ ಹಿನ್ನೆಲೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್, ಫಕೀರಪ್ಪನನ್ನು ವಶಕ್ಕೆ ಪಡೆಯುವಂತೆ ಡಿಸಿಪಿಗೆ ಸೂಚನೆ ನೀಡಿದೆ.

ಹೈಕೋರ್ಟ್​ ದಾರಿ ತಪ್ಪಿಸಲು ಯತ್ನಿಸಿದ ಅತ್ಯಾಚಾರ ಆರೋಪಿ ಕಾನ್​ಸ್ಟೇಬಲ್; ಮತ್ತೆ ಜಾಮೀನು ರುದ್ದು
ಪಾದರಾಯನಪುರ ಗಲಭೆ ಕೇಸ್
Ramesha M
| Edited By: |

Updated on:Mar 12, 2024 | 9:43 PM

Share

ಬೆಂಗಳೂರು, ಮಾ.12: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪ ಸಂಬಂಧ ಮಹದೇವಪುರ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಪಡಿಸಿದೆ. ಅಲ್ಲದೆ, ಫಕೀರಪ್ಪ ಹಟ್ಟಿ​ ವಶಕ್ಕೆ ಪಡೆಯಲು ಡಿಸಿಪಿಗೆ ಸೂಚನೆ ನೀಡಿದ ಕೋರ್ಟ್, 1 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ.

ಮನೆ ಖಾಲಿ ಮಾಡಿಸುವ ವಿಚಾರದಲ್ಲಿ ಠಾಣೆಗೆ ತೆರಳಿದ್ದಾಗ ಮಹದೇವಪುರ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಂತ್ರಸ್ತೆ ಪರಿಚಯ ಮಾಡಿಕೊಂಡಿದ್ದ. ಬಳಿಕ ವಿವಾಹವಾಗುವುದಾಗಿ ನಂಬಿಸಿ 2019 ರಿಂದ 2022 ರ ವರೆಗೆ ಆಕೆಯ ಮೇಲೆ ಫಕೀರಪ್ಪ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಆಯುಕ್ತರ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸಂಬಂಧಿಕನಿಂದಲೇ ಅತ್ಯಾಚಾರ, 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ

ಬಳಿಕ ಸೆಷನ್ಸ್ ಕೋರ್ಟ್​ಗೆ ಸಂತ್ರಸ್ತೆ ಖಾಸಗಿ ದೂರು ದಾಖಲಿಸಿದ್ದಳು. ಅದರಂತೆ ಫಕೀರಪ್ಪಗೆ ನಿರೀಕ್ಷಣಾ ಜಾಮೀನು ದೊರಕಿತ್ತು. ಆದರೆ, ಸೆಷನ್ಸ್ ಕೋರ್ಟ್ ಆರೋಪಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿತ್ತು. ಜಾಮೀನು ರದ್ದಾದ ವಿಚಾರವನ್ನು ಸೆಷನ್ಸ್ ಕೋರ್ಟ್ ಗಮನಕ್ಕೆ ಫಕೀರಪ್ಪ ತಂದಿರಲಿಲ್ಲ.

ಹೀಗಾಗಿ ಫಕೀರಪ್ಪ ಹಟ್ಟಿ​ಯನ್ನು ವಶಕ್ಕೆ ಪಡೆಯಲು ಡಿಸಿಪಿಗೆ ಸೂಚನೆ ನೀಡಿದ ನ್ಯಾ. ಹೆಚ್.ಪಿ.ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಕೋರ್ಟ್ ದಾರಿ ತಪ್ಪಿಸಿದ ಆರೋಪಿ ಫಕೀರಪ್ಪ ಹಟ್ಟಿ​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ, ಆರೋಪಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ.

ನ್ಯಾಯಾಲಯಕ್ಕೇ ಯಾಮಾರಿಸಲು ಯತ್ನಿಸಿದ್ದ ಕಾನ್​ಸ್ಟೇಬಲ್

ಪ್ರಕರಣ ಸಂಬಂಧ ಆರೋಪಿ ಫಕೀರಪ್ಪಗೆ 2022ರಲ್ಲಿ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದಾದ ನಂತರ ತನ್ನ ವಿರುದ್ಧದ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಫಕೀರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದನು. ಆದರೆ, ಅರ್ಜಿಯಲ್ಲಿ ಜಾಮೀನು ರದ್ದಾದ ವಿಚಾರವನ್ನು ಪ್ರಸ್ತಾಪಿಸರಿಲಿಲ್ಲ. ಹೀಗಾಗಿ ಫಕೀರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಸ್ಟೇ ನೀಡಿತ್ತು.

ಬಳಿಕ ಆರೋಪಿಯ ಜಾಮೀನು ರದ್ದಾಗಿದ್ದ ವಿಚಾರ ಕೋರ್ಟ್ ಗಮನಕ್ಕೆ ಬರುತ್ತಿದ್ದಂತೆ ಫಕೀರಪ್ಪ ಸೆಷನ್ ಕೋರ್ಟ್​ ಮುಂದೆ ಶರಣಾಗಿ ಜಾಮೀನು ಅರ್ಜಿ ಸಲ್ಲಿಸಿದ್ದನು. ಕೋರ್ಟ್ ಮತ್ತೆ ಫಕೀರಪ್ಪಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಳು. ಇದೀಗ ಸೆಷನ್ ಕೋರ್ಟ್​ ಎರಡನೇ ಬಾರಿ ನೀಡಿದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆರೋಪಿಯನ್ನು ವಶಕ್ಕೆ ಪಡೆಯುವಂತೆ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Tue, 12 March 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ