AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರಕ್ಕೊಳಗಾದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ

ಗರ್ಭಪಾತಕ್ಕೆ ನಿರ್ದೇಶನ ಕೋರಿ 13 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: ವಿವೇಕ ಬಿರಾದಾರ|

Updated on:Nov 12, 2022 | 5:18 PM

Share

ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. 13 ವರ್ಷದ ಸಂತ್ರಸ್ತ ಬಾಲಕಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ 25 ವಾರಗಳ ಭ್ರೂಣದ ಗರ್ಭಪಾತಕ್ಕೆ ಮನವಿ ಮಾಡಿದ್ದರು. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ಶಾಲಾ ಪ್ರಮಾಣಪತ್ರ ಮತ್ತು ರೇಡಿಯಾಲಜಿಸ್ಟ್ ನೀಡಿದ ಸ್ಕ್ಯಾನ್ ವರದಿಯ ಪ್ರಕಾರ ಆಕೆ 25 ವಾರಗಳ ಗರ್ಭಿಣಿ ಎಂದು ಸಂತ್ರಸ್ತೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಬಳಿಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಬಾಲಕಿಯ ಗರ್ಭಪಾತಕ್ಕೆ ವಾಣಿವಿಲಾಸ್ ಆಸ್ಪತ್ರೆಗೆ ಸೂಚನೆ ನೀಡಿದರು.

ವೈದ್ಯರು ಸಂತ್ರಸ್ತ ಬಾಲಕಿಯನ್ನು ತಪಾಸಣೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದರೆ, ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಭ್ರೂಣ ತೆಗೆಸಿದ ನಂತರ ಪ್ರಕರಣದ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣವನ್ನು ಡಿಎನ್​ಎ ಪರೀಕ್ಷೆಗಾಗಿ ಕಾಯ್ದಿರಿಸಬೇಕು.

ಇನ್ನೂ ಬಾಲಕಿಯನ್ನು ಆಸ್ಪತ್ರೆಗೆ ಹೋಗುವುದ ಮತ್ತು ಬರುವುದಕ್ಕಾಗಿ ಪೊಲೀಸರು ವ್ಯವಸ್ಥೆ ಮಾಡಬೇಕುವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಎಂದು ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Sat, 12 November 22

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ