AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ವ್ಯಕ್ತಿಯೊಬ್ಬ ರ್ಯಾಪಿಡೋ ಬೈಕ್​ ಸೇವೆ ಪಡೆದಿದ್ದಾನೆ. ಬಳಿಕ ಅದೇ ವ್ಯಕ್ತಿ ಅನಾರೋಗ್ಯದ ಕಾರಣ ನೀಡಿ ಚಾಲಕನಿಂದ ಹಣ ಪಡೆದು ವಂಚಿಸಿದ್ದಾನೆ. ಈ ಘಟನೆ ಬೆಂಗಳೂರಿನ ಮೈಕೋಲೇಔಟ್​ನಲ್ಲಿ ನಡೆದಿದೆ.

Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ
ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ (ಸಾಂದರ್ಭಿಕ ಚಿತ್ರ)
Shivaprasad B
| Edited By: Rakesh Nayak Manchi|

Updated on: Jul 28, 2023 | 10:23 PM

Share

ಬೆಂಗಳೂರು, ಜುಲೈ 28: ಕಷ್ಟಕ್ಕೆ ಮರುಗಿದ ರ್ಯಾಪಿಡೋ (Rapido) ಚಾಲಕನಿಗೇ ಗ್ರಾಹಕನೊಬ್ಬ ವಂಚನೆ ಎಸಗಿದ ಘಟನೆ ನಗರದ ಮೈಕೋಲೇಔಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನಗೆ ಗ್ರಾಹಕನೊಬ್ಬ ನಾಲ್ಕು ಸಾವಿರ ರೂಪಾಯಿ ವಂಚಿಸಿರುವುದಾಗಿ ಆರೋಪಿಸಿ ರ್ಯಾಪಿಡೋ ಬೈಕ್ ಚಾಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಣವೀರ್ ಎಂಬಾತ ರ್ಯಾಪಿಡೋ ಬೈಕ್ ಸರ್ವೀಸ್ ಪಡೆದಿದ್ದಾನೆ. ನಂತರ ಬೈಕ್ ಚಾಲಕ ಮಣಿಕಂಠನ ಬಳಿ ತನ್ನ ಪತ್ನಿಯ ಅನಾರೋಗ್ಯದ ನೆಪ ಹೇಳಿದ್ದ ರಣವೀರ್, ಆಸ್ಪತ್ರೆಗೆ ದಾಖಲಿಸಿದ್ದ ಬಿಲ್ ಪಾವತಿಗೆ ಹಣ ಬೇಕಿದೆ. ನಾಲ್ಕು ಸಾವಿರ ಹಣ ಕೊಡಿ ಆನಂತರ ನೀಡುತ್ತೇನೆ ಎಂದಿದ್ದಾನೆ.

ಇದನ್ನೂ ಓದಿ: Online cheating: ಮಿಲಿಟರಿಯಲ್ಲಿದ್ದೇನೆ ಎಂದು ವಂಚಿಸಿದ ವ್ಯಕ್ತಿ- ಓಎಲ್ಎಕ್ಸ್ ನಲ್ಲಿ ಜಾಹೀರಾತು ನೀಡಿ ವಂಚನೆಗೊಳಗಾದ ಮನೆ ಮಾಲೀಕ!

ಗ್ರಾಹಕನ ಸಂಕಷ್ಟಕ್ಕೆ ಮರುಗಿದ ಮಣಿಕಂಠ, ನಾಲ್ಕು ಸಾವಿರ ರೂಪಾಯಿ ಕಳುಹಿಸಿದ್ದಾರೆ. ಇದಾದ ಕೆಲ ಸಮಯದ ನಂತರ ರಣವೀರ್, ಮಣಿಕಂಠನಿಗೆ ಹಣ ಪಾವತಿಯ ಸ್ಕ್ರೀನ್ ಶಾಟ್​ವೊಂದನ್ನು ಕಳುಹಿಸಿದ್ದಾನೆ. ಆದರೆ ದುಡ್ಡು ಬಂದಿರಲಿಲ್ಲ. ಆತ ಕಳುಹಿಸಿದ್ದು ನಕಲಿ ಸ್ಕ್ರೀನ್ ಶಾಟ್ ಎಂದು ಅರಿತ ಮಣಿಕಂಠ, ರಣವೀರ್​ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಮಣಿಕಂಠ ಅವರ ನಂಬರ್ ಅನ್ನು ಬ್ಲಾಕ್ ಮಾಡಿದ್ದಾನೆ.

ವಂಚನೆ ಸಂಬಂಧ ರ್ಯಾಪಿಡೋ ಚಾಲಕ ಮಣಿಕಂಠ, ಮೈಕೋ‌ಲೇಔಟ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು