Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ವ್ಯಕ್ತಿಯೊಬ್ಬ ರ್ಯಾಪಿಡೋ ಬೈಕ್​ ಸೇವೆ ಪಡೆದಿದ್ದಾನೆ. ಬಳಿಕ ಅದೇ ವ್ಯಕ್ತಿ ಅನಾರೋಗ್ಯದ ಕಾರಣ ನೀಡಿ ಚಾಲಕನಿಂದ ಹಣ ಪಡೆದು ವಂಚಿಸಿದ್ದಾನೆ. ಈ ಘಟನೆ ಬೆಂಗಳೂರಿನ ಮೈಕೋಲೇಔಟ್​ನಲ್ಲಿ ನಡೆದಿದೆ.

Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ
ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on: Jul 28, 2023 | 10:23 PM

ಬೆಂಗಳೂರು, ಜುಲೈ 28: ಕಷ್ಟಕ್ಕೆ ಮರುಗಿದ ರ್ಯಾಪಿಡೋ (Rapido) ಚಾಲಕನಿಗೇ ಗ್ರಾಹಕನೊಬ್ಬ ವಂಚನೆ ಎಸಗಿದ ಘಟನೆ ನಗರದ ಮೈಕೋಲೇಔಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನಗೆ ಗ್ರಾಹಕನೊಬ್ಬ ನಾಲ್ಕು ಸಾವಿರ ರೂಪಾಯಿ ವಂಚಿಸಿರುವುದಾಗಿ ಆರೋಪಿಸಿ ರ್ಯಾಪಿಡೋ ಬೈಕ್ ಚಾಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಣವೀರ್ ಎಂಬಾತ ರ್ಯಾಪಿಡೋ ಬೈಕ್ ಸರ್ವೀಸ್ ಪಡೆದಿದ್ದಾನೆ. ನಂತರ ಬೈಕ್ ಚಾಲಕ ಮಣಿಕಂಠನ ಬಳಿ ತನ್ನ ಪತ್ನಿಯ ಅನಾರೋಗ್ಯದ ನೆಪ ಹೇಳಿದ್ದ ರಣವೀರ್, ಆಸ್ಪತ್ರೆಗೆ ದಾಖಲಿಸಿದ್ದ ಬಿಲ್ ಪಾವತಿಗೆ ಹಣ ಬೇಕಿದೆ. ನಾಲ್ಕು ಸಾವಿರ ಹಣ ಕೊಡಿ ಆನಂತರ ನೀಡುತ್ತೇನೆ ಎಂದಿದ್ದಾನೆ.

ಇದನ್ನೂ ಓದಿ: Online cheating: ಮಿಲಿಟರಿಯಲ್ಲಿದ್ದೇನೆ ಎಂದು ವಂಚಿಸಿದ ವ್ಯಕ್ತಿ- ಓಎಲ್ಎಕ್ಸ್ ನಲ್ಲಿ ಜಾಹೀರಾತು ನೀಡಿ ವಂಚನೆಗೊಳಗಾದ ಮನೆ ಮಾಲೀಕ!

ಗ್ರಾಹಕನ ಸಂಕಷ್ಟಕ್ಕೆ ಮರುಗಿದ ಮಣಿಕಂಠ, ನಾಲ್ಕು ಸಾವಿರ ರೂಪಾಯಿ ಕಳುಹಿಸಿದ್ದಾರೆ. ಇದಾದ ಕೆಲ ಸಮಯದ ನಂತರ ರಣವೀರ್, ಮಣಿಕಂಠನಿಗೆ ಹಣ ಪಾವತಿಯ ಸ್ಕ್ರೀನ್ ಶಾಟ್​ವೊಂದನ್ನು ಕಳುಹಿಸಿದ್ದಾನೆ. ಆದರೆ ದುಡ್ಡು ಬಂದಿರಲಿಲ್ಲ. ಆತ ಕಳುಹಿಸಿದ್ದು ನಕಲಿ ಸ್ಕ್ರೀನ್ ಶಾಟ್ ಎಂದು ಅರಿತ ಮಣಿಕಂಠ, ರಣವೀರ್​ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಮಣಿಕಂಠ ಅವರ ನಂಬರ್ ಅನ್ನು ಬ್ಲಾಕ್ ಮಾಡಿದ್ದಾನೆ.

ವಂಚನೆ ಸಂಬಂಧ ರ್ಯಾಪಿಡೋ ಚಾಲಕ ಮಣಿಕಂಠ, ಮೈಕೋ‌ಲೇಔಟ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್