AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಾಲೇಔಟ್​ನ ವಿದ್ಯಾಸಾಗರ ಪಬ್ಲಿಕ್ ಶಾಲೆ ಶಿಕ್ಷಕಿಯನ್ನು ವಜಾಗೊಳಿಸಿದ್ದಕ್ಕೆ ಆಕ್ರೋಶ! ರಾಷ್ಟ್ರ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಚಂದ್ರಾ ಲೇಔಟ್​ನ ವಿದ್ಯಾಸಾಗರ್ ಶಾಲೆಯಲ್ಲಿ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚನೆ ನೀಡಿದ್ದಕ್ಕೆ ಇಂದು ಪೋಷಕರು ಶಿಕ್ಷಕರ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಶಿಕ್ಷಕರು ಕಿರುಕುಳ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಚಂದ್ರಾಲೇಔಟ್​ನ ವಿದ್ಯಾಸಾಗರ ಪಬ್ಲಿಕ್ ಶಾಲೆ ಶಿಕ್ಷಕಿಯನ್ನು ವಜಾಗೊಳಿಸಿದ್ದಕ್ಕೆ ಆಕ್ರೋಶ! ರಾಷ್ಟ್ರ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ
ವಿದ್ಯಾಸಾಗರ ಪಬ್ಲಿಕ್ ಶಾಲೆ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪೋಷಕರು (ಸಂಗ್ರಹ)
TV9 Web
| Updated By: sandhya thejappa|

Updated on:Feb 12, 2022 | 4:09 PM

Share

ಬೆಂಗಳೂರು: ನಗರದ ಚಂದ್ರಾಲೇಔಟ್​ನ ವಿದ್ಯಾಸಾಗರ ಪಬ್ಲಿಕ್ ಸ್ಕೂಲ್ನಲ್ಲಿ (Vidhyadagar Public School) ನಡೆದ ಪೋಷಕರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಶಾಲೆ ಎದುರು ರಾಷ್ಟ್ರ ರಕ್ಷಣಾ ವೇದಿಕೆ ಪ್ರತಿಭಟನೆಗೆ ಮುಂದಾಗಿದೆ. ಶಿಕ್ಷಕಿ ಶಶಿಕಲಾರನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಶಾಲೆ ಎದುರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ. ಶಿಕ್ಷಕಿ ಶಶಿಕಲಾರನ್ನು ಏಕಾಏಕಿ ಕೆಲಸದಿಂದ ಹೇಗೆ ಕೈಬಿಟ್ರಿ? ವಿವರಣೆ ಪಡೆಯದೆ ಕೆಲಸದಿಂದ ತೆಗೆದಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ. ಏನಾದರೂ ಸಮಸ್ಯೆಯಾಗಿದ್ದರೆ ಅಮಾನತುಗೊಳಿಸಬಹುದಿತ್ತು. ಶಿಕ್ಷಕಿ ಶಶಿಕಲಾಗೆ ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ ಅಂತ ರಾಷ್ಟ್ರ ರಕ್ಷಣಾ ವೇದಿಕೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಹೇಳಿಕೆ ನೀಡಿದ್ದಾರೆ.

ಪ್ರಕರಣ ಏನು?: ಚಂದ್ರಾ ಲೇಔಟ್​ನ ವಿದ್ಯಾಸಾಗರ್ ಶಾಲೆಯಲ್ಲಿ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚನೆ ನೀಡಿದ್ದಕ್ಕೆ ಇಂದು ಪೋಷಕರು ಶಿಕ್ಷಕರ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಶಿಕ್ಷಕರು ಕಿರುಕುಳ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ನಡುವೆ ಬೋರ್ಡ್ ಮೇಲೆ ಹಿಜಾಬ್ ಬಗ್ಗೆ ಅಶ್ಲೀಲವಾಗಿ ಬರೆದಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ವಿವಾದಕ್ಕೆ ಕಾರಣವಾದ ಶಿಕ್ಷಕಿ ಶಶಿಕಲಾ ಅವರನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿತ್ತು.

ತನಿಖೆ ವೇಳೆ ಮಾಹಿತಿ ಬಹಿರಂಗ: ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಮಾಹಿತಿ ಬಹಿರಂಗವಾಗಿದೆ. ಶಿಕ್ಷಕಿ ಪಾಠ ಮಾಡುವಾಗ ಮಕ್ಕಳು ಗಲಾಟೆ ಮಾಡಿದ್ದಾರೆ. ಈ ವೇಳೆ ಬೋರ್ಡ್ ಮೇಲೆ KLS ಎಂದು ಶಿಕ್ಷಕಿ ಬರೆದಿದ್ದಾರೆ. ಇದರ ಅರ್ಥ ಹೇಳಿ ಎಂದು ಶಿಕ್ಷಕಿ ಶಶಿಕಲಾ ಪ್ರಶ್ನಿಸಿದ್ದಾರೆ. ಆಗ ವಿದ್ಯಾರ್ಥಿಗಳು ಬೈಗುಳದ ನಾನಾ ಅರ್ಥ ಹೇಳಿದ್ದಾರೆ. ಗಲಾಟೆ ಮಾಡುತ್ತಿದ್ದವರ ಹೆಸರು ಬರೆದಿರುವುದಾಗಿ ಶಿಕ್ಷಕಿ ಹೇಳಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಶಿಕ್ಷಕಿ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪ ಮಾಡಿದ್ದರು. ಆದರೆ ಶಾಲೆಯಲ್ಲಿ ಹಿಜಾಬ್ ವಿಚಾರಕ್ಕೆ ಬೈದಿಲ್ಲ ಅಂತ ಶಿಕ್ಷಕಿ ಶಶಿಕಲಾ ತಿಳಿಸಿದ್ದಾರೆ. ಸದ್ಯ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ.

ವಿದ್ಯಾಸಾಗರ ಶಾಲೆಯಲ್ಲಿ ಗೊಂದಲದ ವಾತಾವರಣವಿತ್ತು. ಹೀಗಾಗಿ ವಿದ್ಯಾಸಾಗರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಪೋಷಕರು ಆರೋಪಿಸಿದ ಶಿಕ್ಷಕಿ ಜತೆ ಚರ್ಚೆ ಮಾಡಿದ್ದೇನೆ. ಕೇವಲ ಪಾಠವನ್ನು ಮಾತ್ರ ಮಾಡಿದ್ದೇನೆಂದು ಹೇಳಿದ್ದಾರೆ. ಯಾವುದೇ ಕೋರ್ಟ್ ವಿಚಾರ ಚರ್ಚಿಸಿಲ್ಲವೆಂದು ತಿಳಿಸಿದ್ದಾರೆ. ಸದರಿ ಶಿಕ್ಷಕಿ ಸ್ಪಷ್ಟನೆ ನೀಡಿದ್ದಾರೆ ಎಂದು ಡಿಡಿಪಿಐ ಬೈಲಾಂಜನಪ್ಪ ಹೇಳಿದ್ದಾರೆ.

ಇದನ್ನೂ ಓದಿ

ಛತ್ತೀಸ್​ಗಢದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ; ಸಿಆರ್​ಪಿಎಫ್ ಅಧಿಕಾರಿ ಹುತಾತ್ಮ, ಇನ್ನೋರ್ವ ಯೋಧನ ಸ್ಥಿತಿ ಗಂಭೀರ

‘ಪುನೀತ್​ ಸರ್ ಫೋಟೋ ಹಾಕಿಲ್ಲ, ತುಂಬ ಬೇಜಾರಾಯ್ತು’: ತಮ್ಮದೇ ಚಿತ್ರತಂಡದ ವಿರುದ್ಧ ವಿನೋದ್​ ಪ್ರಭಾಕರ್​ ಗರಂ

Published On - 4:06 pm, Sat, 12 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!