AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!

ಬ್ರೋಕರ್ಸ್ ಮೊದಲು ಪಿಎಸ್ಐ ಅಭ್ಯರ್ಥಿಗಳನ್ನು ಹುಡುಕುತ್ತಿದ್ದರು. ಅಭ್ಯರ್ಥಿಗಳಿಗೆ ಮೂರು ಬಗೆಯ ಆಯ್ಕೆಗಳನ್ನು ನೀಡುತ್ತಿದ್ದರು. ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್ ಆಗುತ್ತಿತ್ತು. ಒಎಂಆರ್ ತಿದ್ದುಪಡಿಗೆ 80 ಲಕ್ಷ ರೂ. ಫಿಕ್ಟ್ ಮಾಡುತ್ತಿದ್ದರು.

ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 12, 2022 | 11:33 AM

Share

ಬೆಂಗಳೂರು: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಪೊಲೀಸರು (CID Police) ತನಿಖೆ ನಡೆಸುತ್ತಿದ್ದಾರೆ. ತನಿಖೆ ಹೆಚ್ಚಾದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಇದೀಗ ಪಿಎಸ್ಐ ಡೀಲ್ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಮಧ್ಯವರ್ತಿಗಳು ಹೊರ ಹಾಕಿದ್ದಾರೆ. ಅಕ್ರಮದ ಮಧ್ಯವರ್ತಿಗಳಾದ ಶರತ್, ಮಂಜುನಾಥ್ ಡೀಲಿಂಗ್ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳ ಜೊತೆ ಹೇಗೆಲ್ಲಾ ಡೀಲ್ ಮಾಡುತ್ತಿದ್ದರು? ಪರೀಕ್ಷೆಗೆ ಎಷ್ಟೆಲ್ಲ ರೇಟ್ ಫಿಕ್ಸ್ ಆಗುತ್ತಿತ್ತು? ಎಂದು ಬಾಯಿಬಿಟ್ಟಿದ್ದಾರೆ.

ಬ್ರೋಕರ್ಸ್ ಮೊದಲು ಪಿಎಸ್ಐ ಅಭ್ಯರ್ಥಿಗಳನ್ನು ಹುಡುಕುತ್ತಿದ್ದರು. ಅಭ್ಯರ್ಥಿಗಳಿಗೆ ಮೂರು ಬಗೆಯ ಆಯ್ಕೆಗಳನ್ನು ನೀಡುತ್ತಿದ್ದರು. ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್ ಆಗುತ್ತಿತ್ತು. ಒಎಂಆರ್ ತಿದ್ದುಪಡಿಗೆ 80 ಲಕ್ಷ ರೂ. ಫಿಕ್ಟ್ ಮಾಡುತ್ತಿದ್ದರು. ಅಡ್ವಾನ್ಸ್ 40 ಲಕ್ಷ ರೂ. ಕೇಳುತ್ತಿದ್ದರು. ಬ್ಲೂಟೂತ್​ನಲ್ಲಿ ಉತ್ತರಕ್ಕೆ 60 ಲಕ್ಷ ರೂಪಾಯಿ ನಿಗದಿ ಮಾಡಿ, 30 ಲಕ್ಷ ರೂ. ಅಡ್ವಾನ್ಸ್ ಪಡೆಯುತ್ತಿದ್ದರು. ಇನ್ವಿಜಿಲೇಟರ್ ಬುಕ್ಕಿಂಗ್ಗೆ 50 ಲಕ್ಷ ರೂ. ಫಿಕ್ಸ್ ಮಾಡಿ, 25 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆಯುತ್ತಿದ್ದರು ಎಂದು ಶರತ್, ಮಂಜುನಾಥ್ ತಿಳಿಸಿದ್ದಾರೆ.

ಇನ್ನು ಬ್ರೋಕರ್ಸ್ ಅಭ್ಯರ್ಥಿಗಳ ಎಲ್ಲಾ ವಿವರಗಳನ್ನ ಪಡೆಯುತ್ತಿದ್ದರು. ರೋಲ್ ನಂಬರ್, ರಿಜಿಸ್ಟರ್ ನಂಬರ್, ಸೆಂಟರ್ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ನಂತರ ಎಲ್ಲಾ ಮಾಹಿತಿಗಳನ್ನು ನೇಮಕಾತಿ ವಿಭಾಗದ ಅಧಿಕಾರಿಗಳಿಗೆ ತಿಳಿಸುತ್ತಿದ್ದರು. ಹಾಗಾದರೆ ನೇಮಕಾತಿ ವಿಭಾಗದ ಅಧಿಕಾರಿಗಳಿಂದಲೇ ಓಎಮ್ಆರ್ ತಿದ್ದುಪಡಿ ನಡೆಯುತ್ತಿತ್ತಾ? ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ಓದಿ
Image
International Nurses Day 2022: ದಾದಿಯರ ಮಾನಸಿಕ ಆರೋಗ್ಯ ಕಾಪಾಡಲು ಇಲ್ಲಿವೆ ಸಲಹೆ
Image
ಜೀ5ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಜತೆ ಪ್ರಸಾರಕ್ಕೆ ಸಜ್ಜಾದ ಕನ್ನಡದ ‘ತಲೆದಂಡ’, ‘ಮುಗಿಲ್​ ಪೇಟೆ’ ಸಿನಿಮಾಗಳು
Image
David Warner: ನೋ ಬಾಲ್ ಅಲ್ಲ: ವಿಕೆಟ್​ಗೆ ಚೆಂಡು ತಾಗಿದರೂ ನಾಟೌಟ್ ಆದ ಡೇವಿಡ್ ವಾರ್ನರ್: ವಿಡಿಯೋ
Image
ನಿಮಗಿದು ಗೊತ್ತೇ?; 73 ವರ್ಷಗಳಿಂದ ಭಾರತದ ಈ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಜನರು!

ಕಿಂಗ್​ಪಿನ್ ರುದ್ರಗೌಡನ ಸಹಚರ ಶಿವಪ್ಪ ಆಲಮೇಲ್​ನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಶಿವಪ್ಪ ಆಲಮೇಲ್ ತಲೆಮರೆಸಿಕೊಂಡಿದ್ದ. ಕೆಲ ತಿಂಗಳ ಹಿಂದೆ ಬಸವರಾಜ್ ಪಾಟೀಲ್​ ಎಂಬಾತನ ಅಪಹರಣ ಮಾಡಿ ಶಿವಪ್ಪ, ರುದ್ರಗೌಡ ಬಸವರಾಜ್​ನನ್ನು ಕಿಡ್ನಾಪ್ ಮಾಡಿ ಹಲ್ಲೆಗೈದಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಶಿವಪ್ಪನನ್ನು ವಶಕ್ಕೆ ಪಡೆದ್ದರು.

Published On - 11:12 am, Thu, 12 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?