AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!

ಬ್ರೋಕರ್ಸ್ ಮೊದಲು ಪಿಎಸ್ಐ ಅಭ್ಯರ್ಥಿಗಳನ್ನು ಹುಡುಕುತ್ತಿದ್ದರು. ಅಭ್ಯರ್ಥಿಗಳಿಗೆ ಮೂರು ಬಗೆಯ ಆಯ್ಕೆಗಳನ್ನು ನೀಡುತ್ತಿದ್ದರು. ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್ ಆಗುತ್ತಿತ್ತು. ಒಎಂಆರ್ ತಿದ್ದುಪಡಿಗೆ 80 ಲಕ್ಷ ರೂ. ಫಿಕ್ಟ್ ಮಾಡುತ್ತಿದ್ದರು.

ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:May 12, 2022 | 11:33 AM

ಬೆಂಗಳೂರು: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಪೊಲೀಸರು (CID Police) ತನಿಖೆ ನಡೆಸುತ್ತಿದ್ದಾರೆ. ತನಿಖೆ ಹೆಚ್ಚಾದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಇದೀಗ ಪಿಎಸ್ಐ ಡೀಲ್ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಮಧ್ಯವರ್ತಿಗಳು ಹೊರ ಹಾಕಿದ್ದಾರೆ. ಅಕ್ರಮದ ಮಧ್ಯವರ್ತಿಗಳಾದ ಶರತ್, ಮಂಜುನಾಥ್ ಡೀಲಿಂಗ್ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳ ಜೊತೆ ಹೇಗೆಲ್ಲಾ ಡೀಲ್ ಮಾಡುತ್ತಿದ್ದರು? ಪರೀಕ್ಷೆಗೆ ಎಷ್ಟೆಲ್ಲ ರೇಟ್ ಫಿಕ್ಸ್ ಆಗುತ್ತಿತ್ತು? ಎಂದು ಬಾಯಿಬಿಟ್ಟಿದ್ದಾರೆ.

ಬ್ರೋಕರ್ಸ್ ಮೊದಲು ಪಿಎಸ್ಐ ಅಭ್ಯರ್ಥಿಗಳನ್ನು ಹುಡುಕುತ್ತಿದ್ದರು. ಅಭ್ಯರ್ಥಿಗಳಿಗೆ ಮೂರು ಬಗೆಯ ಆಯ್ಕೆಗಳನ್ನು ನೀಡುತ್ತಿದ್ದರು. ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್ ಆಗುತ್ತಿತ್ತು. ಒಎಂಆರ್ ತಿದ್ದುಪಡಿಗೆ 80 ಲಕ್ಷ ರೂ. ಫಿಕ್ಟ್ ಮಾಡುತ್ತಿದ್ದರು. ಅಡ್ವಾನ್ಸ್ 40 ಲಕ್ಷ ರೂ. ಕೇಳುತ್ತಿದ್ದರು. ಬ್ಲೂಟೂತ್​ನಲ್ಲಿ ಉತ್ತರಕ್ಕೆ 60 ಲಕ್ಷ ರೂಪಾಯಿ ನಿಗದಿ ಮಾಡಿ, 30 ಲಕ್ಷ ರೂ. ಅಡ್ವಾನ್ಸ್ ಪಡೆಯುತ್ತಿದ್ದರು. ಇನ್ವಿಜಿಲೇಟರ್ ಬುಕ್ಕಿಂಗ್ಗೆ 50 ಲಕ್ಷ ರೂ. ಫಿಕ್ಸ್ ಮಾಡಿ, 25 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆಯುತ್ತಿದ್ದರು ಎಂದು ಶರತ್, ಮಂಜುನಾಥ್ ತಿಳಿಸಿದ್ದಾರೆ.

ಇನ್ನು ಬ್ರೋಕರ್ಸ್ ಅಭ್ಯರ್ಥಿಗಳ ಎಲ್ಲಾ ವಿವರಗಳನ್ನ ಪಡೆಯುತ್ತಿದ್ದರು. ರೋಲ್ ನಂಬರ್, ರಿಜಿಸ್ಟರ್ ನಂಬರ್, ಸೆಂಟರ್ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ನಂತರ ಎಲ್ಲಾ ಮಾಹಿತಿಗಳನ್ನು ನೇಮಕಾತಿ ವಿಭಾಗದ ಅಧಿಕಾರಿಗಳಿಗೆ ತಿಳಿಸುತ್ತಿದ್ದರು. ಹಾಗಾದರೆ ನೇಮಕಾತಿ ವಿಭಾಗದ ಅಧಿಕಾರಿಗಳಿಂದಲೇ ಓಎಮ್ಆರ್ ತಿದ್ದುಪಡಿ ನಡೆಯುತ್ತಿತ್ತಾ? ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ಓದಿ
Image
International Nurses Day 2022: ದಾದಿಯರ ಮಾನಸಿಕ ಆರೋಗ್ಯ ಕಾಪಾಡಲು ಇಲ್ಲಿವೆ ಸಲಹೆ
Image
ಜೀ5ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಜತೆ ಪ್ರಸಾರಕ್ಕೆ ಸಜ್ಜಾದ ಕನ್ನಡದ ‘ತಲೆದಂಡ’, ‘ಮುಗಿಲ್​ ಪೇಟೆ’ ಸಿನಿಮಾಗಳು
Image
David Warner: ನೋ ಬಾಲ್ ಅಲ್ಲ: ವಿಕೆಟ್​ಗೆ ಚೆಂಡು ತಾಗಿದರೂ ನಾಟೌಟ್ ಆದ ಡೇವಿಡ್ ವಾರ್ನರ್: ವಿಡಿಯೋ
Image
ನಿಮಗಿದು ಗೊತ್ತೇ?; 73 ವರ್ಷಗಳಿಂದ ಭಾರತದ ಈ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಜನರು!

ಕಿಂಗ್​ಪಿನ್ ರುದ್ರಗೌಡನ ಸಹಚರ ಶಿವಪ್ಪ ಆಲಮೇಲ್​ನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಶಿವಪ್ಪ ಆಲಮೇಲ್ ತಲೆಮರೆಸಿಕೊಂಡಿದ್ದ. ಕೆಲ ತಿಂಗಳ ಹಿಂದೆ ಬಸವರಾಜ್ ಪಾಟೀಲ್​ ಎಂಬಾತನ ಅಪಹರಣ ಮಾಡಿ ಶಿವಪ್ಪ, ರುದ್ರಗೌಡ ಬಸವರಾಜ್​ನನ್ನು ಕಿಡ್ನಾಪ್ ಮಾಡಿ ಹಲ್ಲೆಗೈದಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಶಿವಪ್ಪನನ್ನು ವಶಕ್ಕೆ ಪಡೆದ್ದರು.

Published On - 11:12 am, Thu, 12 May 22

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ