AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?

CCB: ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು.

Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2022 | 4:11 PM

Share

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿರುವ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆದಿದೆ! ಪ್ರಭಾವಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಈ ರೇವ್ ಪಾರ್ಟಿಯಲ್ಲಿ (Rave party) ಭಾಗಿಯಾಗಿದ್ದಾರೆ. ಆದರೆ ಸಿಸಿಬಿ ಪೊಲೀಸರು (CCB) ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್‌ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ (BIAL Airport) ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು. ಹೊರ ದೇಶದ-ಹೊರ ರಾಜ್ಯದ ಯುವತಿಯರ ಕರೆ ತಂದು ವೇಶ್ಯಾವಾಟಿಕೆ ನಡೆದಿತ್ತು. ಆ ವೇಳೆ ಯುವತಿಯರು ವೀಸಾ-ಪಾಸ್ ಪೋರ್ಟ್ ಹಾಜರುಪಡಿಸಿಲ್ಲ. ಹಾಗಾಗಿ ಮಾನವ ಕಳ್ಳಸಾಕಣೆ ಕಾಯ್ದೆ ಅಡಿ ಎಫ್ ಐಆರ್ ದಾಖಲಾಗಿತ್ತು. ಜೆಡಿ ಗಾರ್ಡನ್ ಮಾಲೀಕ ಶ್ರೀನಿವಾಸ್ ಸುಬ್ರಮಣ್ಯ ಸೇರಿದಂತೆ 9 ಆರೋಪಿಗಳ ವಿರುದ್ದ ಮಾತ್ರ ಕೇಸ್ ದಾಖಲು ಮಾಡಿಕೊಳ್ಳಲಾಗಿತ್ತು.

ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿಯಾದ ಬೆನ್ನಲ್ಲೇ ಠಾಣಾ ವ್ಯಾಪ್ತಿ ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಿಂದ ಚಿಕ್ಕಜಾಲ ಠಾಣಾ ವ್ಯಾಪ್ತಿಗೆ ಬದಲಾವಣೆಗೊಂಡಿತ್ತು. ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ನಿತಿನ್ ಬಚಾವ್ ಮಾಡುವ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 40 ಕ್ಕೂ ಹೆಚ್ಚು ಜನರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರೂ ಸಹ ಕೇವಲ 9 ಜನರ ವಿರುದ್ದ ಕೇಸ್ ದಾಖಲಾಗಿದೆ. ಹಾಗಾಗಿ ಈ ಬೆಳವಣಿಗೆಗಳು ಇದೀಗ ಸಂಶಯಕ್ಕೆ ಎಡೆಮಾಡಿಕೊಡ್ತಿದೆ.

Published On - 3:42 pm, Fri, 16 September 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ