AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?

CCB: ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು.

Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2022 | 4:11 PM

Share

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿರುವ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆದಿದೆ! ಪ್ರಭಾವಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಈ ರೇವ್ ಪಾರ್ಟಿಯಲ್ಲಿ (Rave party) ಭಾಗಿಯಾಗಿದ್ದಾರೆ. ಆದರೆ ಸಿಸಿಬಿ ಪೊಲೀಸರು (CCB) ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್‌ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ (BIAL Airport) ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು. ಹೊರ ದೇಶದ-ಹೊರ ರಾಜ್ಯದ ಯುವತಿಯರ ಕರೆ ತಂದು ವೇಶ್ಯಾವಾಟಿಕೆ ನಡೆದಿತ್ತು. ಆ ವೇಳೆ ಯುವತಿಯರು ವೀಸಾ-ಪಾಸ್ ಪೋರ್ಟ್ ಹಾಜರುಪಡಿಸಿಲ್ಲ. ಹಾಗಾಗಿ ಮಾನವ ಕಳ್ಳಸಾಕಣೆ ಕಾಯ್ದೆ ಅಡಿ ಎಫ್ ಐಆರ್ ದಾಖಲಾಗಿತ್ತು. ಜೆಡಿ ಗಾರ್ಡನ್ ಮಾಲೀಕ ಶ್ರೀನಿವಾಸ್ ಸುಬ್ರಮಣ್ಯ ಸೇರಿದಂತೆ 9 ಆರೋಪಿಗಳ ವಿರುದ್ದ ಮಾತ್ರ ಕೇಸ್ ದಾಖಲು ಮಾಡಿಕೊಳ್ಳಲಾಗಿತ್ತು.

ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿಯಾದ ಬೆನ್ನಲ್ಲೇ ಠಾಣಾ ವ್ಯಾಪ್ತಿ ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಿಂದ ಚಿಕ್ಕಜಾಲ ಠಾಣಾ ವ್ಯಾಪ್ತಿಗೆ ಬದಲಾವಣೆಗೊಂಡಿತ್ತು. ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ನಿತಿನ್ ಬಚಾವ್ ಮಾಡುವ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 40 ಕ್ಕೂ ಹೆಚ್ಚು ಜನರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರೂ ಸಹ ಕೇವಲ 9 ಜನರ ವಿರುದ್ದ ಕೇಸ್ ದಾಖಲಾಗಿದೆ. ಹಾಗಾಗಿ ಈ ಬೆಳವಣಿಗೆಗಳು ಇದೀಗ ಸಂಶಯಕ್ಕೆ ಎಡೆಮಾಡಿಕೊಡ್ತಿದೆ.

Published On - 3:42 pm, Fri, 16 September 22

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ