Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?

| Updated By: ಸಾಧು ಶ್ರೀನಾಥ್​

Updated on: Sep 16, 2022 | 4:11 PM

CCB: ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು.

Rave party: ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
ಜೆಡಿ ಗಾರ್ಡನ್ ರೇವ್ ಪಾರ್ಟಿ -ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ಪುತ್ರರು ಭಾಗಿ?
Follow us on

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿರುವ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆದಿದೆ! ಪ್ರಭಾವಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಈ ರೇವ್ ಪಾರ್ಟಿಯಲ್ಲಿ (Rave party) ಭಾಗಿಯಾಗಿದ್ದಾರೆ. ಆದರೆ ಸಿಸಿಬಿ ಪೊಲೀಸರು (CCB) ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್‌ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸೆಪ್ಟೆಂಬರ್ 6 ರಂದು ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ (BIAL Airport) ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮುಂದೆ ಅದು ಸಿಸಿಬಿ ಗೆ ಹಸ್ತಾಂತರಗೊಂಡಿತ್ತು. ಹೊರ ದೇಶದ-ಹೊರ ರಾಜ್ಯದ ಯುವತಿಯರ ಕರೆ ತಂದು ವೇಶ್ಯಾವಾಟಿಕೆ ನಡೆದಿತ್ತು. ಆ ವೇಳೆ ಯುವತಿಯರು ವೀಸಾ-ಪಾಸ್ ಪೋರ್ಟ್ ಹಾಜರುಪಡಿಸಿಲ್ಲ. ಹಾಗಾಗಿ ಮಾನವ ಕಳ್ಳಸಾಕಣೆ ಕಾಯ್ದೆ ಅಡಿ ಎಫ್ ಐಆರ್ ದಾಖಲಾಗಿತ್ತು. ಜೆಡಿ ಗಾರ್ಡನ್ ಮಾಲೀಕ ಶ್ರೀನಿವಾಸ್ ಸುಬ್ರಮಣ್ಯ ಸೇರಿದಂತೆ 9 ಆರೋಪಿಗಳ ವಿರುದ್ದ ಮಾತ್ರ ಕೇಸ್ ದಾಖಲು ಮಾಡಿಕೊಳ್ಳಲಾಗಿತ್ತು.

ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿಯಾದ ಬೆನ್ನಲ್ಲೇ ಠಾಣಾ ವ್ಯಾಪ್ತಿ ಬಿಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಿಂದ ಚಿಕ್ಕಜಾಲ ಠಾಣಾ ವ್ಯಾಪ್ತಿಗೆ ಬದಲಾವಣೆಗೊಂಡಿತ್ತು. ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ನಿತಿನ್ ಬಚಾವ್ ಮಾಡುವ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 40 ಕ್ಕೂ ಹೆಚ್ಚು ಜನರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರೂ ಸಹ ಕೇವಲ 9 ಜನರ ವಿರುದ್ದ ಕೇಸ್ ದಾಖಲಾಗಿದೆ. ಹಾಗಾಗಿ ಈ ಬೆಳವಣಿಗೆಗಳು ಇದೀಗ ಸಂಶಯಕ್ಕೆ ಎಡೆಮಾಡಿಕೊಡ್ತಿದೆ.

Published On - 3:42 pm, Fri, 16 September 22