AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
TV9 Web
| Updated By: ಆಯೇಷಾ ಬಾನು|

Updated on: Sep 15, 2021 | 1:57 PM

Share

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ