AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು

Bengaluru RCB victory Celebration Stampede: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು
ಕಿಕ್ಕಿರಿದು ಸೇರಿರುವ ಆರ್​ಸಿಬಿ ಅಭಿಮಾನಿಗಳು
Kiran Surya
| Edited By: |

Updated on:Jun 04, 2025 | 8:02 PM

Share

ಬೆಂಗಳೂರು, ಜೂನ್​ 04: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು (Bengaluru) ನಗರಕ್ಕೆ ಬಂದಿದ್ದಾರೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ.  ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ನೋಡಿ: ವಿಧಾನಸೌಧದ ಮುಂದೆ ಆರ್​ಸಿಬಿ ಅಭಿಮಾನಿಗಳ ದಂಡು, ಎತ್ತ ನೋಡಿದರೂ ರೆಡ್​ ಆರ್ಮಿ!

ಇದನ್ನೂ ಓದಿ
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದ ಆರ್​ಸಿಬಿ
Image
ಆರ್​​ಸಿಬಿ ಮಾಲೀಕರು ಯಾರು? ಐಪಿಎಲ್ ಗೆಲುವಿನಿಂದ ಸಿಕ್ಕ ಲಾಭವೆಷ್ಟು?
Image
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Wed, 4 June 25

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ