AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ ಪ್ರಕರಣ: ಕಪ್ ಗೆದ್ದ ಖುಷಿಯಲ್ಲಿದ್ದ ಆರ್‌ಸಿಬಿ ಮ್ಯಾನೇಜ್‌ಮೆಂಟ್​ಗೆ ಎದುರಾಯ್ತು ಸಂಕಷ್ಟ..!

RCB IPL Victory Stampede: ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚಾಂಪಿಯನ್​​ ಆಗಿ ಹೊರಹೊಮ್ಮಿದೆ. ಬರೋಬ್ಬರಿ 18 ವರ್ಷಗಳ ಕನಸು ಕನಸು ಮಾಡುವ ಮೂಲಕ ಈ ಸಲ ಕಪ್​ ನಮ್ದೇ ಎಂದು ಚಾಂಪಿಯನ್​ ಆಗಿದೆ. ಇನ್ನು ಮೊದಲ ಬಾರಿಗೆ ಕಪ್ ಗೆದ್ದ ಖುಷಿಯಲ್ಲಿದ್ದ ಆರ್​ ಸಿಬಿ ಮ್ಯಾನೇಜ್‌ಮೆಂಟ್‌ ಸಂಕಷ್ಟ ಎದುರಾಗಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ಕಪ್ ಗೆದ್ದ ಖುಷಿಯಲ್ಲಿದ್ದ ಆರ್‌ಸಿಬಿ ಮ್ಯಾನೇಜ್‌ಮೆಂಟ್​ಗೆ ಎದುರಾಯ್ತು ಸಂಕಷ್ಟ..!
Rcb
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jun 05, 2025 | 7:22 PM

Share

ಬೆಂಗಳೂರು, (ಜೂನ್ 05): ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಈ ಬಾರಿ ಐಪಿಎಲ್​​ ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಇದೇ ಖುಷಿಯಲ್ಲಿ ಆರ್ ಸಿಬಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಆದ್ರೆ, ಈ ಸಂಭ್ರಮಾಚರಣೆಯಲ್ಲಿ 11 ಆರ್​ ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನು ಈ ಸಂಬಂಧ ಆರ್​ ಸಿಬಿ ಮ್ಯಾನೇಜ್‌ಮೆಂಟ್‌ ವಿರುದ್ಧ ಎಫ್​ ಐಆರ್ ದಾಖಲಾಗಿದೆ. ಈ ಮೊದಲು ಘಟನೆ ಸಂಬಂಧ ಯುಡಿಆರ್ ದಾಖಲಾಗಿದ್ದಕ್ಕೆ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೇ ನಿಮ್ಮ ಟಿವಿ9 ನಿರಂತರವಾಗಿ ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ (RCB management), ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಷನ್‌) ವಿರುದ್ಧ ಎಫ್​ ಐಆರ್ ದಾಖಲಿಸಿಕೊಂಡಿದ್ದಾರೆ.

ಬಿಎನ್‌ಎಸ್‌ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿದ್ದು, ಎ1 ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಎ2 ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಆಗಿದ್ದರೆ ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಷನ್‌)ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಪ್ರಕರಣ: ಘಟನೆ ಬಗ್ಗೆ ಸರ್ಕಾರ ಹೈಕೋರ್ಟ್​ಗೆ ಕೊಟ್ಟ ಕಾರಣವೇನು?

ಆರ್ ಸಿಬಿ ಸಂಭ್ರಮಾಚರಣೆ ವೇಲೆ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿರುವ ಸಂಬಂಧ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡಿದ್ದರು. ಯುಡಿಆರ್ ದಾಖಲಿಸಿದ್ದ ಬಗ್ಗೆ ಟಿವಿ9 ಬೆಳಗ್ಗೆಯಿಂದ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ 24 ಗಂಟೆ ಬಳಿಕ ಪೊಲೀಸರು ಎಫ್​ ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ
Image
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ RCB
Image
Stampede: ಕಾಲ್ತುಳಿತ ಪ್ರಕರಣದ ತನಿಖೆ ಮ್ಯಾಜಿಸ್ಟ್ರೇಟ್ ಹೆಗಲಿಗೆ
Image
KSCA ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ: ಸಿಎಂ
Image
ಐಪಿಎಲ್ ಸಂಭ್ರಮದಲ್ಲಿ ಸೂತಕ; ಯಡವಟ್ಟಾಗಿದ್ದೆಲ್ಲಿ, ಹೊಣೆ ಯಾರು?

ಯಾವ ಸೆಕ್ಷನ್‌ ಗೆ ಏನು ಶಿಕ್ಷೆ?

  • ಸೆಕ್ಷನ್‌ 105-ಕೊಲೆಯ ಉದ್ದೇಶವಿಲ್ಲದೇ ವ್ಯಕ್ತಿಯ ಸಾವಿಗೆ ಕಾರಣವಾಗುವುದು ಕನಿಷ್ಠ 5 ವರ್ಷದಿಂದ 10 ವರ್ಷಗಳವರೆಗೂ ಶಿಕ್ಷೆಗೆ ಅವಕಾಶವಿದೆ.
  • ಸೆಕ್ಷನ್‌ 115(2)-ಮತ್ತೊಬ್ಬ ವ್ಯಕ್ತಿಗೆ ಗಾಯವನ್ನುಂಟುಮಾಡುವುದು, 1 ವರ್ಷದವರೆಗೆ ಶಿಕ್ಷೆ
  • ಸೆಕ್ಷನ್‌ 118(1)-ಸಮಾನ ಉದ್ದೇಶದಿಂದ ವಸ್ತುವಿನ ಸಹಾಯದಿಂದ ತೀವ್ರ ಗಾಯ ಮಾಡುವುದು
  • ಸೆಕ್ಷನ್‌ 118(2)-ಒಂದು ವರ್ಷದಿಂದ 10 ವರ್ಷಗಳವರೆಗೂ ಶಿಕ್ಷೆ
  • ಸೆಕ್ಷನ್‌ 190-ಅಕ್ರಮ ಗುಂಪುಗೂಡಿದ ಸದಸ್ಯರಿಂದ ಆದ ಕೃತ್ಯಕ್ಕೆ ಗುಂಪಿನ ಎಲ್ಲರೂ ಹೊಣೆ
  • ಸೆಕ್ಷನ್‌ 132-ಸರ್ಕಾರದ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು, 2 ವರ್ಷಗಳವರೆಗೂ ಶಿಕ್ಷೆ
  • ಸೆಕ್ಷನ್‌ 125(a) (b)-ಇತರರ ಜೀವಕ್ಕೆ ಹಾನಿಯಾಗುವ ಕೃತ್ಯವೆಸಗುವುದು ಇದಕ್ಕೆ 6 ತಿಂಗಳಿನಿಂದ 3 ವರ್ಷಗಳವರೆಗೂ ಶಿಕ್ಷೆಯಾಗುತ್ತೆ

ಬೆಂಗಳೂರು ಕಾಲ್ತುಳಿತ ದುರಂತ ಸದ್ಯ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್​ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಅಲ್ಲದೇ ರಾಜ್ಯ ಸರ್ಕಾರ ಈ ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದೆ. ಈ ಮಧ್ಯೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಎಸ್​​ಸಿಎ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದ್ದು, ಘಟನೆ ಸಂಬಂಧ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Thu, 5 June 25