AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೇರಿ ನಾಲ್ವರ ತೀವ್ರ ವಿಚಾರಣೆ: ಪೊಲೀಸರು ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ

ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಸಂಬಂಧ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನವಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಸಿಸಿಬಿ ಅಧಿಕಾರಿಗಳು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದು, ಅನೇಕ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆ ಹಾಕಿದ್ದಾರೆ. ವಿವರಗಳು ಇಲ್ಲಿವೆ.

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೇರಿ ನಾಲ್ವರ ತೀವ್ರ ವಿಚಾರಣೆ: ಪೊಲೀಸರು ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ
ಬಂಧಿತ ನಿಖಿಲ್​ ಸೋಸಲೆ, ಸುನೀಲ್ ಮತ್ತು ಸುಮಂತ್
ಗಣಪತಿ ಶರ್ಮಾ
|

Updated on:Jun 06, 2025 | 10:50 AM

Share

ಬೆಂಗಳೂರು, ಜೂನ್ 6: ಆರ್​ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy stampede) ಸಂಬಂಧ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರು ಕಾರ್ಯಕ್ರಮ ಆಯೋಜಕರನ್ನು ಸಿಸಿಬಿ ಪೊಲೀಸರು ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತೀವ್ರತರದ ವಿಚಾರಣೆಗೆ ಒಳಪಡಿಸಲಾಗಿದೆ. ಖುದ್ದು ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ನಾಲ್ವರ ವಿಚಾರಣೆ ನಡೆಸಲಾಗುತ್ತಿದೆ. ಇದೇ ವೇಳೆ ಹಲವು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ ಎಂಬುದು ತಿಳಿದುಬಂದಿದೆ.

ಬಂಧಿತರಿಗೆ ಸಿಸಿಬಿ ಪೊಲೀಸರು ಕೇಳಿದ ಪ್ರಶ್ನೆಗಳೇನು?

  • ಪೊಲೀಸರು ಅನುಮತಿ ನಿರಾಕರಿಸಿದ್ದರೂ ಉಚಿತ ಪಾಸ್​ ಸಂಬಂಧ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದು ಯಾಕೆ?
  • ನಿಮಗೆ ಬೇರೆ ಯಾರಾದರೂ ಆ ತರ ಪೋಸ್ಟ್ ಹಾಕಲು ಹೇಳಿದ್ದರೇ?
  • ಸ್ಟೇಡಿಯಂ ಕಾರ್ಯಕ್ರಮ ನಿಗದಿ ಮಾಡಿಕೊಂಡಿದ್ದು ಯಾವಾಗ?
  • ವಿಕ್ಟರಿ ಪರೇಡ್ ಬಗ್ಗೆ ಹೇಗೆ ನಿರ್ಧಾರ ಕೈಗೊಂಡಿರಿ?
  • ಟಿಕೆಟ್ ವಿಚಾರದಲ್ಲಿ ತುಂಬಾ ಗೊಂದಲ ಆಗಿದ್ದು ಯಾಕೆ?
  • ಕಾಲ್ತುಳಿತ ಪ್ರಕರಣದ ಬಗ್ಗೆ ನಿಮಗೆ ಗೊತ್ತಿರುವುದು ಏನು?

ಇಷ್ಟೇ ಅಲ್ಲದೆ, ಇನ್ನೂ ಅನೇಕ ಪ್ರಶ್ನೆಗಳನ್ನು ಬಂಧಿತರಿಗೆ ಕೇಳಲಾಗಿದ್ದು, ಮಾಹಿತಿ ಕಲೆ ಹಾಕಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಸಂಬಂಧ ಬಂಧಿತರು ಯಾರೆಲ್ಲ?

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಎಂಬವರನ್ನು ಬಂಧಿಸಲಾಗಿದೆ. ಇವರು ಮುಂಬೈಗೆ ತೆರಳುತ್ತಿದ್ದಾಗ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ
Image
ಸರ್ಕಾರ ಸ್ಥಿಮಿತ ತಪ್ಪಿದೆ, ಸಿಎಂ ಹೇಡಿಯಂತೆ ವರ್ತಿಸಿದ್ದಾರೆ: ಭಾಸ್ಕರ ರಾವ್
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಎಂದು, ಪೊಲೀಸರು ಅನುಮತಿ ನಿರಾಕರಿಸಿದ ನಂತರವೂ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದ ಆರೋಪ ನಿಖಿಲ್​ ಸೋಸಲೆ ಮೇಲಿದೆ. ಅಲ್ಲದೆ, ಸ್ಟೇಡಿಯಂಗೆ ಉಚಿತ ಪಾಸ್​ ಸಂಬಂಧ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ ಆರೋಪವೂ ಇದೆ.

(ವರದಿ: ಪ್ರದೀಪ್ ಚಿಕ್ಕಾಟಿ, ‘ಟಿವಿ9’, ಬೆಂಗಳೂರು)

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Fri, 6 June 25

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?