RCB-CSK ಪಂದ್ಯ: ಸ್ಟೇಡಿಯಂ ಬಳಿ ಅನುಮಾನಾಸ್ಪದವಾಗಿ ಓಡಾಡ್ತಿದ್ದ 8 ಜನ ಪೊಲೀಸ್ ವಶಕ್ಕೆ

RCB vs CSK: ಇತ್ತೀಚೆಗೆ ನಡೆದ ಐಪಿಎಲ್​​ ಪಂದ್ಯದಲ್ಲಿ ಸುಮಾರು 72 ಮೊಬೈಲ್​ ಕಳ್ಳತನವಾಗಿದ್ದವು. ಅಷ್ಟೇ ಅಲ್ಲದೆ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಹೀಗಾಗಿ ಇಂದಿನ ಆರ್​​ಸಿಬಿ-ಸಿಎಸ್​ಕೆ ಪಂದ್ಯ ಹಿನ್ನಲೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಒಟ್ಟು 8 ಜನರ ವಶಕ್ಕೆ ಪಡೆದಿದ್ದಾರೆ.

RCB-CSK ಪಂದ್ಯ: ಸ್ಟೇಡಿಯಂ ಬಳಿ ಅನುಮಾನಾಸ್ಪದವಾಗಿ ಓಡಾಡ್ತಿದ್ದ 8 ಜನ ಪೊಲೀಸ್ ವಶಕ್ಕೆ
ಎಂ.ಚಿನ್ನಸ್ವಾಮಿ ಕ್ರೀಡಾಂಗಣ
Image Credit source: royalchallengers.com
Edited By:

Updated on: Apr 05, 2026 | 6:14 PM

ಬೆಂಗಳೂರು, ಏಪ್ರಿಲ್​​ 05: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ಆರ್​ಸಿಬಿ (RCB) ಹಾಗೂ ಚೆನ್ನೈ ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾತರರಾಗಿದ್ದು, ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸಿ ಒಳ ಬಿಡುತ್ತಿದ್ದಾರೆ. ಈ ಮಧ್ಯೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರು ಸೇರಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ.

ಕಳ್ಳತನ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಎಂದ ಸೀಮಂತ್ ಕುಮಾರ್ ಸಿಂಗ್

ಇತ್ತೀಚೆಗೆ ಮೊಬೈಲ್ ಕಳ್ಳತನ ಹಿನ್ನೆಲೆ ಉತ್ತರ ಭಾರತದಿಂದ ಬಂದಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅನುಮಾನಸ್ಪದವಾಗಿ ಓಡಾಡುತ್ತಿದ್ದವರನ್ನು ವಶಕ್ಕೆ ಪಡೆದಿರುವ ಪೊಲೀಸರು ದಾಖಲೆ ಪತ್ರ ಮತ್ತು ಟಿಕೆಟ್​ ಎಲ್ಲವನ್ನೂ ಪರಿಶೀಲಿಸುತ್ತಿದ್ದಾರೆ. ಇನ್ನು ಪಿಕ್ ಪಾಕೆಟ್ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

72 ಮೊಬೈಲ್ ಕದ್ದಿದ್ದ 13 ಮಂದಿ ಅರೆಸ್ಟ್

ಇತ್ತೀಚೆಗೆ ಅಂದರೆ ಮಾರ್ಚ್​ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಆರ್‌ಸಿಬಿ ಮಧ್ಯೆ ಐಪಿಎಲ್​ ಉದ್ಘಾಟನಾ ಪಂದ್ಯ ನಡೆದಿತ್ತು. ಪಂದ್ಯ ನೋಡ್ತಾ ಫ್ಯಾನ್ಸ್​ ಕುಣಿದು ಕುಪ್ಪಳಿಸುತ್ತಿದ್ದರೆ, ಅಪ್ರಾಪ್ತ ಹುಡುಗರ ಗ್ಯಾಂಗ್​​ ಮೊಬೈಲ್‌ಗಳನ್ನ ಸದ್ದಿಲ್ಲದೆ ಕದಿಯುತ್ತಿದ್ದರು. ಒಂದಲ್ಲ, ಎರಡಲ್ಲ, ಬರೋಬ್ಬರಿ 72 ಮೊಬೈಲ್​ಗಳನ್ನ ಸೈಲೆಂಟಾಗಿ ದೋಚಿದ್ದರು.

ಇದನ್ನೂ ಓದಿ: ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಹೀಗೆ 72 ಮೊಬೈಲ್​ ಕದ್ದ 9 ಅಪ್ರಾಪ್ತರು ಸೇರಿ 13 ಮಂದಿಯನ್ನ ಅರೆಸ್ಟ್ ಮಾಡಲಾಗಿತ್ತು. ಜಾರ್ಖಂಡ್​ನಿಂದ ಅಪ್ರಾಪ್ತರ ಗ್ಯಾಂಗ್ ಕಟ್ಕೊಂಡು ಬಂದಿದ್ದ ಸೋಹನ್ ಕುಮಾರ್, ಸಂಜೀತ್ ಕುಮಾರ್, ಇಶಾಲ್‌ಕುಮಾರ್ ಮತ್ತು ಶುಭಮನ್​ನ ಗ್ಯಾಂಗ್ ಅಂದರ್​ ಆಗಿತ್ತು.

ಇದನ್ನೂ ಓದಿ: RCB vs CSK IPL 2026: ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ಪೊಲೀಸ್ ಬಿಗಿ ಭದ್ರತೆ!

ಇನ್ನು ಮೈದಾನದ ಸುತ್ತಮುತ್ತ ಭದ್ರತೆಗೆ 2,300 ಪೊಲೀಸರ ನಿಯೋಜನೆ ಮಾಡಲಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಬಿಎಂಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್, ಮೆಟ್ರೋ ಸೇವೆ ಈ ಹಿಂದಿನ ಪಂದ್ಯದಂತೆಯೇ ಇರಲಿದೆ. ತಡರಾತ್ರಿ 2 ಗಂಟೆಯವರೆಗೂ ನಮ್ಮ ಮೆಟ್ರೋ ರೈಲು ಸಂಚಾರವಿರುತ್ತೆ. ಸುರಕ್ಷತೆಗಾಗಿ ಸ್ಟೇಡಿಯಂ ಸಮೀಪದ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು, ಟಿಕೆಟ್ ಇಲ್ಲದವರು ಸ್ಟೇಡಿಯಂ ಸುತ್ತಮುತ್ತ ಬಾರದಂತೆ ಸೂಚನೆ ನೀಡಲಾಗಿದೆ. ನಕಲಿ ಟಿಕೆಟ್ ಮಾರಾಟ, ಬೆಟ್ಟಿಂಗ್ ಚಟುವಟಿಕೆ ಮೇಲೆ ಸಿಸಿಬಿ ನಿಗಾ ಇಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us