AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿಂದು RCB vs CSK ಪಂದ್ಯ: ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ, ಎಲ್ಲೆಲ್ಲಿ ಅವಕಾಶ? ಇಲ್ಲಿದೆ ಮಾಹಿತಿ

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ​ಆರ್​​ಸಿಬಿ ಮತ್ತು ಸಿಎಸ್​ಕೆ ನಡುವೆ ಪಂದ್ಯ ಹೈವೋಲ್ಟೇಜ್ ನಡೆಯಲಿದೆ. ಹೀಗಾಗಿ ನಗರದ ಹಲವು ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ. ವಿವರ ಇಲ್ಲಿದೆ.

ಬೆಂಗಳೂರಿನಲ್ಲಿಂದು RCB vs CSK ಪಂದ್ಯ: ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ, ಎಲ್ಲೆಲ್ಲಿ ಅವಕಾಶ? ಇಲ್ಲಿದೆ ಮಾಹಿತಿ
ಸಂಚಾರ ಸಲಹೆ
Shivaprasad B
| Edited By: |

Updated on:May 18, 2024 | 8:36 AM

Share

ಬೆಂಗಳೂರು, ಮೇ 17: ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿಯಲ್ಲಿ ಇಂದು (ಶನಿವಾರ ಮೇ 17) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್​ಕಿಂಗ್ಸ್​ (CSK) ಸೆಣಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಮತ್ತು ಎಲ್ಲೆಲ್ಲಿ ವಾಹನ ಸಂಚಾರ ನಿಷೇಧವನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಪಾರ್ಕಿಂಗ್ ನಿಷೇಧ

ಶನಿವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್​ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಕಸ್ತೂರಿ ಬಾ ರೋಡ್, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ: ಸಂಜೆ ವೇಳೆ ಹವಾಮಾನ ಹೇಗಿರಲಿದೆ?

ಪಾರ್ಕಿಂಗ್​ಗೆ ಅವಕಾಶ

ಪಂದ್ಯ ನೋಡಲು ಆಗಮಿಸುವ ಜನರಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಕಿಂಗ್ಸ್​ ರಸ್ತೆ, ಶಿವಾಜಿನಗರ ಬಸ್ ನಿಲ್ದಾಣ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಬೆಂಗಳೂರು ಸಂಚಾರಿ ಪೊಲೀಸರು ಮೈದಾನದ ಸುತ್ತಮುತ್ತ ಸಂಚಾರ ವಾಹನ ನಿಷೇಧಿಸಿದ್ದಾರೆ.

ಬಿಗಿ ಭದ್ರತೆ

ಪಂದ್ಯಕ್ಕಾಗಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಓರ್ವ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಟ್ರಾಫಿಕ್ ಡಿಸಿಪಿ, ಸೇರಿ 200 ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಮಫ್ತಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:32 am, Sat, 18 May 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ