AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Match In Bengaluru: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್; ಸಂಚಾರ ಮಾರ್ಗದಲ್ಲಿ ಬದಲಾವಣೆ

ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಮಾವಣೆ ಮಾಡಲಾಗಿದೆ.

RCB Match In Bengaluru: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್; ಸಂಚಾರ ಮಾರ್ಗದಲ್ಲಿ ಬದಲಾವಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ-ಲಕ್ನೋ IPL ಮ್ಯಾಚ್ ಹಿನ್ನೆಲೆ ಏಪ್ರಿಲ್ 10ರಂದು ಸಂಚಾರ ಮಾರ್ಗದಲ್ಲಿ ಬದಲಾವಣೆ
Rakesh Nayak Manchi
|

Updated on:Apr 09, 2023 | 9:50 PM

Share

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಾಳೆ (ಏಪ್ರಿಲ್ 10) ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ರಾಜ್ಯದಲ್ಲಿ ಆರ್​ಸಿಬಿ ಅಭಿಮಾನಿಗಳ ಸಂಖ್ಯೆ ಅತ್ಯಧಿಕವಾಗಿರುವುದರಿಂದ ನಾಳಿನ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುತ್ತಾರೆ. ಹೀಗಾಗಿ ವಾಹನ ಸವಾರರ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆ ಸಂಚಾರ ಮಾರ್ಗದಲ್ಲಿ ಬದಮಾವಣೆ ಮಾಡಿದೆ. ಮಾರ್ಗ ಬದಲಾವಣೆಯು ಪಂದ್ಯ ನಡೆಯುವ ದಿನ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಇರಲಿದೆ. ನಂತರ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಈ ಮಾರ್ಗದಲ್ಲಿ ಸಂಚಾರಕ್ಕೆ ನಿರ್ಬಂಧ

ಎಂಜಿ ರೋಡ್, ಕ್ವೀನ್ಸ್ ರೋಡ್, ಎಂಜಿ ರೋಡ್​ನಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ರೋಡ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತುರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ರೋಡ್, ನೃತತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಾಹನ ಸವಾರರು ಸಂಜೆ 4 ಗಂಟೆಯಿಂದ 10 ಗಂಟೆ ವರೆಗೆ ಈ ರಸ್ತೆ ಮಾರ್ಗಗಳನ್ನು ಬಳಸದೆ ಬೇರೆ ಮಾರ್ಗಗಳಲ್ಲಿ ಸಂಚರಿಸಬೇಕಾಗಿದೆ.

ಇದನ್ನೂ ಓದಿ: IPL 2023: RCB ತಂಡದಲ್ಲಿ 2 ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11

ಪಾರ್ಕಿಂಗ್ ವ್ಯವಸ್ಥೆ: ಕಿಂಗ್ಸ್ ರಸ್ತೆ, ಬಿಆರ್​ಬಿ ಮೈದಾನ, ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಓಲ್ಡ್​ ಕೆಜಿಯಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡವು 2ನೇ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ಕೆಲವು ಆಟಗಾರರನ್ನು ಕೈಬಿಟ್ಟು ಅವರ ಜಾಗಕ್ಕೆ ಬೇರೆ ಆಟಗಾರರನ್ನು ಕಣಕ್ಕಿಳಿಸಲು ಮುಂದಾಗಿದೆ. ಆ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಆರ್​ಸಿಬಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Sun, 9 April 23

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!