Bengaluru Traffic Advisory: ಬೆಂಗಳೂರಿನಲ್ಲಿಂದು ಆರ್​​ಸಿಬಿ, ಎಸ್​ಆರ್​ಎಚ್ ಪಂದ್ಯ; ಎಲ್ಲೆಲ್ಲಿ ಪಾರ್ಕಿಂಗ್? ಇಲ್ಲಿದೆ ಮಾಹಿತಿ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ಇಂದು ನಡೆಯಲಿದ್ದು, ಟ್ರಾಫಿಕ್ ನಿರ್ವಹಣೆಗೆ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಗರದ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದ್ದು, ಇನ್ನು ಕೆಲವು ಕಡೆಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆ ಕುರಿತ ವಿವರ ಇಲ್ಲಿದೆ.

Bengaluru Traffic Advisory: ಬೆಂಗಳೂರಿನಲ್ಲಿಂದು ಆರ್​​ಸಿಬಿ, ಎಸ್​ಆರ್​ಎಚ್ ಪಂದ್ಯ; ಎಲ್ಲೆಲ್ಲಿ ಪಾರ್ಕಿಂಗ್? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ

Updated on: Apr 15, 2024 | 7:41 AM

ಬೆಂಗಳೂರು, ಏಪ್ರಿಲ್ 15: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾಸ್ (SRH) ಸೆಣಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂಬುದನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ, ಪಾರ್ಕಿಂಗ್ ನಿರ್ಬಂಧ ಹಾಗೂ ಪರ್ಯಾಯ ಪಾರ್ಕಿಂಗ್ ಸ್ಥಳಗಳ ಕುರಿತಾದ ಮಾರ್ಗಸೂಚಿ ಇಂದು ಮಧ್ಯಾಹ್ನ 3:00 ರಿಂದ ರಾತ್ರಿ 11:00 ರವರೆಗೆ ಜಾರಿಯಲ್ಲಿರಲಿದೆ.

ಎಲ್ಲೆಲ್ಲಿ ಪಾರ್ಕಿಂಗ್​ ನಿಷೇಧ?

  • ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಮತ್ತು ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೇದಿಕೆ ರಸ್ತೆ, ಟ್ರಿನಿಟಿ ಜೆಎನ್, ಲಾವೆಲ್ ರಸ್ತೆ
  • ವಿಟ್ಟಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ, ನೃಪತುಂಗ ರಸ್ತೆ

ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹುದು?

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ದೃಷ್ಟಿಯಿಂದ ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸಂಚಾರ ನಿರ್ಬಂಧ, ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಈ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್​ಗೆ ಅವಕಾಶ ಮಾಡಿಕೊಡಲಾಗಿದೆ.

  • ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಗ್ರೌಂಡ್, ಯುಬಿ ಸಿಟಿ ಪಾರ್ಕಿಂಗ್
  • ಬಿಎಂಟಿಸಿ ಟಿಟಿಎಂಸಿ ಶಿವಾಜಿನಗರ 1 ನೇ ಮಹಡಿ ಮತ್ತು ಹಳೆಯ ಕೆಜಿಐಡಿ ಕಟ್ಟಡ
  • ಕಿಂಗ್ಸ್ ರಸ್ತೆ (ಕಬ್ಬನ್ ರಸ್ತೆಯ ಒಳಗೆ)

ಇದನ್ನೂ ಓದಿ: ಮನೆಯಿಂದಲೇ ಮತದಾನದ ವೇಳೆ ಬಿಜೆಪಿ ಏಜೆಂಟ್ ಇದ್ದರೇ? ಕಾಂಗ್ರೆಸ್ ದೂರಿನ ಬಗ್ಗೆ ಆಯೋಗ ಹೇಳಿದ್ದಿಷ್ಟು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us