AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಸಾಧು ಶ್ರೀನಾಥ್​
|

Updated on:Jan 26, 2024 | 3:20 PM

Share

ಬೆಂಗಳೂರು, ಜನವರಿ 26: 2200ಕ್ಕೂ ಅಧಿಕ ಕರಾಟೆ ವಿದ್ಯಾರ್ಥಿಗಳು, 2019ರ ಮಿಸ್ ಜಪಾನ್ (Japan) ನವೋಕೋ ಓಹಾರ ಗ್ರ್ಯಾಂಡ್ ಎಂಟ್ರಿ ಹಾಗೂ ನೂರಾರು ಪೋಷಕರ ಸಮಾಗಮ. ಸಾವಿರಾರು ಸ್ಪರ್ಧಾಳುಗಳ ಬಿಗ್​ಫೈಟ್. ಇದು ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾ (OSK Federation of India – India’s Largest Karate School) ಆರಂಭಿಸಿರುವ ಅಂತಾರಾಷ್ಟ್ರೀಯ ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ನ (International Karate and Kobudo Championship) ಮೊದಲ ದಿನದ ಹೈಲೈಟ್.

ಹೌದು, ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಅಲ್ಲದೇ, ಚಾಂಪಿಯನ್​ಶಿಪ್​​ಗೆ ದೀಪ ಹಚ್ಚುವ ಮೂಲಕ ಉದ್ಘಾಟನೆ ಮಾಡಲಾಯ್ತು. ಇದೇ ವೇಳೆ ಗಣ್ಯರ ಜೊತೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಹಾಗೂ ಏಷ್ಯಾ ಕರಾಟೆ ಫೆಡೆರೇಷನ್​ನ ಜಡ್ಜ್ ಆಗಿರೋ ಶಿಹಾನ್ ಸುರೇಶ್ ಕೆಣಿಚಿರಾ ಕೂಡ ವೇದಿಕೆ ಹಂಚಿಕೊಂಡಿದ್ರು.

ಇದಾದ ನಂತರ ಚಿಕ್ಕ ಮಕ್ಕಳ ಕುಮುಟೆ ಸ್ಪರ್ಧೆ ಆರಂಭವಾಯ್ತು. ಮಕ್ಕಳಿಂದ ಹಿಡಿದು ಒಟ್ಟು 6 ಕೋರ್ಟ್​​ಗಳಲ್ಲಿ ಕರಾಟೆ ಸ್ಪರ್ಧೆ ನಡೆದಿದ್ದು, ವಿಜೇತರಿಗೆ ಸ್ವತಃ ಜಪಾನ್ ಸ್ವಪ್ನ ಸುಂದರಿ ನವೋಕೊ ಓಹಾರ ಮೆಡಲ್ ಧರಿಸಿ, ಅಭಿನಂದಿಸಿದರು. ಒಟ್ಟಾರೆ, ರಿಪಬ್ಲಿಕ್ ಡೇ (Republic Day 2024) ಕರಾಟೆ ಚಾಂಪಿಯನ್​ಶಿಪ್​​ ಮೊದಲ ದಿನವೇ ಭಾರಿ ಯಶಸ್ಸು ಕಂಡಿದೆ. ಇನ್ನೂ ಎರಡು ದಿನ ಮತ್ತಷ್ಟು ರೋಚಕ ಕರಾಟೆ ಕದನಗಳು ನಡೆಯಲಿವೆ.

Published On - 3:17 pm, Fri, 26 January 24

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ