AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 26, 2024 | 3:20 PM

Share

ಬೆಂಗಳೂರು, ಜನವರಿ 26: 2200ಕ್ಕೂ ಅಧಿಕ ಕರಾಟೆ ವಿದ್ಯಾರ್ಥಿಗಳು, 2019ರ ಮಿಸ್ ಜಪಾನ್ (Japan) ನವೋಕೋ ಓಹಾರ ಗ್ರ್ಯಾಂಡ್ ಎಂಟ್ರಿ ಹಾಗೂ ನೂರಾರು ಪೋಷಕರ ಸಮಾಗಮ. ಸಾವಿರಾರು ಸ್ಪರ್ಧಾಳುಗಳ ಬಿಗ್​ಫೈಟ್. ಇದು ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾ (OSK Federation of India – India’s Largest Karate School) ಆರಂಭಿಸಿರುವ ಅಂತಾರಾಷ್ಟ್ರೀಯ ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ನ (International Karate and Kobudo Championship) ಮೊದಲ ದಿನದ ಹೈಲೈಟ್.

ಹೌದು, ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಅಲ್ಲದೇ, ಚಾಂಪಿಯನ್​ಶಿಪ್​​ಗೆ ದೀಪ ಹಚ್ಚುವ ಮೂಲಕ ಉದ್ಘಾಟನೆ ಮಾಡಲಾಯ್ತು. ಇದೇ ವೇಳೆ ಗಣ್ಯರ ಜೊತೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಹಾಗೂ ಏಷ್ಯಾ ಕರಾಟೆ ಫೆಡೆರೇಷನ್​ನ ಜಡ್ಜ್ ಆಗಿರೋ ಶಿಹಾನ್ ಸುರೇಶ್ ಕೆಣಿಚಿರಾ ಕೂಡ ವೇದಿಕೆ ಹಂಚಿಕೊಂಡಿದ್ರು.

ಇದಾದ ನಂತರ ಚಿಕ್ಕ ಮಕ್ಕಳ ಕುಮುಟೆ ಸ್ಪರ್ಧೆ ಆರಂಭವಾಯ್ತು. ಮಕ್ಕಳಿಂದ ಹಿಡಿದು ಒಟ್ಟು 6 ಕೋರ್ಟ್​​ಗಳಲ್ಲಿ ಕರಾಟೆ ಸ್ಪರ್ಧೆ ನಡೆದಿದ್ದು, ವಿಜೇತರಿಗೆ ಸ್ವತಃ ಜಪಾನ್ ಸ್ವಪ್ನ ಸುಂದರಿ ನವೋಕೊ ಓಹಾರ ಮೆಡಲ್ ಧರಿಸಿ, ಅಭಿನಂದಿಸಿದರು. ಒಟ್ಟಾರೆ, ರಿಪಬ್ಲಿಕ್ ಡೇ (Republic Day 2024) ಕರಾಟೆ ಚಾಂಪಿಯನ್​ಶಿಪ್​​ ಮೊದಲ ದಿನವೇ ಭಾರಿ ಯಶಸ್ಸು ಕಂಡಿದೆ. ಇನ್ನೂ ಎರಡು ದಿನ ಮತ್ತಷ್ಟು ರೋಚಕ ಕರಾಟೆ ಕದನಗಳು ನಡೆಯಲಿವೆ.

Published On - 3:17 pm, Fri, 26 January 24

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು