ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಬೆಂಗಳೂರು, ಜನವರಿ 26: 2200ಕ್ಕೂ ಅಧಿಕ ಕರಾಟೆ ವಿದ್ಯಾರ್ಥಿಗಳು, 2019ರ ಮಿಸ್ ಜಪಾನ್ (Japan) ನವೋಕೋ ಓಹಾರ ಗ್ರ್ಯಾಂಡ್ ಎಂಟ್ರಿ ಹಾಗೂ ನೂರಾರು ಪೋಷಕರ ಸಮಾಗಮ. ಸಾವಿರಾರು ಸ್ಪರ್ಧಾಳುಗಳ ಬಿಗ್​ಫೈಟ್. ಇದು ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾ (OSK Federation of India – India’s Largest Karate School) ಆರಂಭಿಸಿರುವ ಅಂತಾರಾಷ್ಟ್ರೀಯ ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ನ (International Karate and Kobudo Championship) ಮೊದಲ ದಿನದ ಹೈಲೈಟ್.

ಹೌದು, ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಆರಂಭಗೊಂಡಿರುವ ಮೂರು ದಿನಗಳ ಕರಾಟೆ ಚಾಂಪಿಯನ್​ಶಿಪ್​​ಗೆ (RDC 24 International Karate Championship) ಅದ್ದೂರಿ ಚಾಲನೆ ಸಿಕ್ಕಿದೆ. ದೇಶದ ಅತಿ ದೊಡ್ಡ ಕರಾಟೆ ಸ್ಕೂಲ್ ಎನ್ನಿಸಿಕೊಂಡಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಈ ಚಾಂಪಿಯನ್​ಶಿಪ್​​ಗೆ ಮಿಸ್ ಜಪಾನ್ ಆಗಮಿಸಿದ್ದು, ಎಲ್ಲರತ್ತ ಕೈ ಬೀಸಿ ಗಮನ ಸೆಳೆದ್ರು.

ಅಲ್ಲದೇ, ಚಾಂಪಿಯನ್​ಶಿಪ್​​ಗೆ ದೀಪ ಹಚ್ಚುವ ಮೂಲಕ ಉದ್ಘಾಟನೆ ಮಾಡಲಾಯ್ತು. ಇದೇ ವೇಳೆ ಗಣ್ಯರ ಜೊತೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಹಾಗೂ ಏಷ್ಯಾ ಕರಾಟೆ ಫೆಡೆರೇಷನ್​ನ ಜಡ್ಜ್ ಆಗಿರೋ ಶಿಹಾನ್ ಸುರೇಶ್ ಕೆಣಿಚಿರಾ ಕೂಡ ವೇದಿಕೆ ಹಂಚಿಕೊಂಡಿದ್ರು.

ಇದಾದ ನಂತರ ಚಿಕ್ಕ ಮಕ್ಕಳ ಕುಮುಟೆ ಸ್ಪರ್ಧೆ ಆರಂಭವಾಯ್ತು. ಮಕ್ಕಳಿಂದ ಹಿಡಿದು ಒಟ್ಟು 6 ಕೋರ್ಟ್​​ಗಳಲ್ಲಿ ಕರಾಟೆ ಸ್ಪರ್ಧೆ ನಡೆದಿದ್ದು, ವಿಜೇತರಿಗೆ ಸ್ವತಃ ಜಪಾನ್ ಸ್ವಪ್ನ ಸುಂದರಿ ನವೋಕೊ ಓಹಾರ ಮೆಡಲ್ ಧರಿಸಿ, ಅಭಿನಂದಿಸಿದರು. ಒಟ್ಟಾರೆ, ರಿಪಬ್ಲಿಕ್ ಡೇ (Republic Day 2024) ಕರಾಟೆ ಚಾಂಪಿಯನ್​ಶಿಪ್​​ ಮೊದಲ ದಿನವೇ ಭಾರಿ ಯಶಸ್ಸು ಕಂಡಿದೆ. ಇನ್ನೂ ಎರಡು ದಿನ ಮತ್ತಷ್ಟು ರೋಚಕ ಕರಾಟೆ ಕದನಗಳು ನಡೆಯಲಿವೆ.

Published On - 3:17 pm, Fri, 26 January 24

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us