AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ ನೀಡಲು ಸಿದ್ಧ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಪ್ರಲ್ಹಾದ್ ಜೋಶಿ ಭರವಸೆ

ಶೇ 7.5 ಕ್ಕೆ ಎಸ್.ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಶೇ 3 ರಷ್ಟು ಇರುವ ಎಸ್.ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ ನೀಡಲು ಸಿದ್ಧ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಪ್ರಲ್ಹಾದ್ ಜೋಶಿ ಭರವಸೆ
ಪ್ರಲ್ಹಾದ್ ಜೋಶಿ
TV9 Web
| Updated By: ಆಯೇಷಾ ಬಾನು|

Updated on:Aug 21, 2022 | 9:04 PM

Share

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ( Pralhad Joshi) ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಪ್ರಲ್ಹಾದ್ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.

ಶೇ 7.5 ಕ್ಕೆ ಎಸ್.ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಶೇ 3 ರಷ್ಟು ಇರುವ ಎಸ್.ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು.

ಎಸ್.ಟಿ ಮೀಸಲಾತಿ ಶೇ 3 ರಿಂದ ಶೇ 7.5 ರಷ್ಟು ಹೆಚ್ಚಿಸಲು ಕೆಲವು ಕಾನೂನಿನ ತೊಡಕಗಳು ಎದುರಾಗಲಿವೆ. ಕಾನೂನಿನ ಅಡ್ಡಿಗಳನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ್ರಲ್ಜಾದ್ ಜೋಶಿ ಹೇಳಿದರು. ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.

Published On - 9:04 pm, Sun, 21 August 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!