AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೈಕೊಟ್ಟ ರಿಯಲ್ ಎಸ್ಟೇಟ್ ಬ್ಯುಸಿನೆಸ್, ಉದ್ಯಮಿ ನೇಣಿಗೆ ಶರಣು

ರಿಯಲ್ ಎಸ್ಟೇಟ್​ನಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರಿಂದ ಉದ್ಯಮಿ ಬ್ರಿಜೇಶ್ ರೆಡ್ಡಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್​ನಲ್ಲಿ ನಡೆದಿದೆ. ಮತ್ತೊಂದೆಡೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕನ ಸಹೋದರನ ಮೇಲೆ ಅನುಮಾನಗಳು ವ್ಯಕ್ತವಾಗಿವೆ.

ಬೆಂಗಳೂರು: ಕೈಕೊಟ್ಟ ರಿಯಲ್ ಎಸ್ಟೇಟ್ ಬ್ಯುಸಿನೆಸ್, ಉದ್ಯಮಿ ನೇಣಿಗೆ ಶರಣು
ಬ್ರಿಜೇಶ್ ರೆಡ್ಡಿ
ರಾಮು, ಆನೇಕಲ್​
| Edited By: |

Updated on: Aug 13, 2023 | 3:03 PM

Share

ಬೆಂಗಳೂರು, (ಆಗಸ್ಟ್ 13):  ರಿಯಲ್ ಎಸ್ಟೇಟ್(Real estate )ಉದ್ಯಮಿ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ(Suiicde) ಮಾಡಿಕೊಂಡಿರುವ ಘಟನೆ ಬೆಂಗಳೂರು(Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿಯ ಮ್ಯಾಂಗೋ ಎಕ್ರೆಸ್ ಲೇಔಟ್ ನಡೆದಿದೆ. ಹೆಚ್​​ಎಸ್​​ಆರ್​​ ಲೇಔಟ್​ನಲ್ಲಿ ಮನೆ, ಆಫೀಸ್ ಮಾಡಿಕೊಂಡಿದ್ದ ಬ್ರಿಜೇಶ್ ರೆಡ್ಡಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟವಾಗಿದ್ದರಿಂದ ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ರಿಯಲ್ ಎಸ್ಟೇಟ್​ನಲ್ಲಿ ಸಾಕಷ್ಟು ಲಾಸ್ ಆಗಿದ್ದರಿಂದ ಇತ್ತೀಚೆಗೆ ಹೆಚ್.ಎಸ್‌.ಆರ್ ಬಳಿಯ ಮನೆ ಮಾರಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿ ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಸೊಂಟಕ್ಕೆ ಮಗು ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ: ಗಂಡ ಸತ್ತ ದಿನವೇ ಘೋರ ದುರಂತ

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ನಗರದ ಅಮೃತಹಳ್ಳಿಯ ಟೆಲಿಕಾಂ ಲೇಔಟ್‌ನ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುಭಾಷ್ ಕುಮಾರ್(30) ಎನ್ನುವ ಯುವಕನ ಶವ ಪತ್ತೆಯಾಗಿದೆ. ಆದ್ರೆ, ಪೊಲೀಸರು ಬರುವ ಮುನ್ನವೇ ಮೃತ ಸುಭಾಷ್ ಸಹೋದರ ಜಿತೇಂದ್ರ, ನೇಣುಬಿಗಿದುಕೊಂಡಿದ್ದ ಹಗ್ಗವನ್ನು ಕತ್ತರಿಸಿ ಶವವನ್ನು ಕೆಳಗಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿತೇಂದ್ರ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಸತ್ಯತೆ ಬಯಲಿಗೆ ಬರಲಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು