AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​, ಬೆಂಗಳೂರಿನಲ್ಲಿ ಸ್ಥಿರಾಸ್ತಿ ಬೆಲೆ ಭಾರಿ ಹೆಚ್ಚಳ: ಬೇಡಿಕೆಯಲ್ಲಿ ಯಾವ ನಗರ ಮುಂದೆ?

Real estate buzzing in Hyderabad and Bengaluru; ಅಂಕಿಅಂಶಗಳ ಪ್ರಕಾರ, ಜೀವನ ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದ ಹೋಲಿಕೆಯಲ್ಲಿ ಬೆಂಗಳೂರಿಗಿಂತಲೂ ಹೈದರಾಬಾದ್​​ ಉತ್ತಮವಾಗಿದೆ. ಹೈದರಾಬಾದ್​​ನಲ್ಲಿ ಜೀವನ ನಿರ್ವಹಣಾ ವೆಚ್ಚ ಬೆಂಗಳೂರಿಗಿಂತ ಶೇ 26ರಷ್ಟು ಕಡಿಮೆ ಎನ್ನಲಾಗಿದೆ. ಬೆಂಗಳೂರನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯಲಾಗಿದ್ದರೂ ಜೀವನ ನಿರ್ವಹಣೆ ವೆಚ್ಚದ ವಿಚಾರದಲ್ಲಿ ಅದು ಹೈದರಾಬಾದ್‌ಗಿಂತ ಹಿಂದಿದೆ.

ಹೈದರಾಬಾದ್​, ಬೆಂಗಳೂರಿನಲ್ಲಿ ಸ್ಥಿರಾಸ್ತಿ ಬೆಲೆ ಭಾರಿ ಹೆಚ್ಚಳ: ಬೇಡಿಕೆಯಲ್ಲಿ ಯಾವ ನಗರ ಮುಂದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Aug 09, 2023 | 9:55 PM

ಬೆಂಗಳೂರು: ಇತ್ತೀಚಿನ ಅಂಕಿಅಂಶಗಳ ಪ್ರಕಾರ ದಕ್ಷಿಣ ಭಾರತದಲ್ಲಿ ಸ್ಥಿರಾಸ್ತಿ ಬೆಲೆಯಲ್ಲಿ (Real estate) ಬಲವಾದ ಏರಿಕೆ ಕಂಡುಬರುತ್ತಿದೆ. ಅದರಲ್ಲಿಯೂ ಬೆಂಗಳೂರು (Bengaluru) ಮತ್ತು ಹೈದರಾಬಾದ್​​ನಲ್ಲಿ (Hyderabad) ರಿಯಲ್ ಎಸ್ಟೇಟ್​​​ ದರ ಗಗನಕ್ಕೇರಿದೆ. ಹೈದರಾಬಾದ್‌ನ ರಿಯಲ್ ಎಸ್ಟೇಟ್ ಸಂಸ್ಥೆಯೊಂದು ಚಾರ್ಮಿನಾರ್ ಬಳಿ ಕೇವಲ ಒಂದು ಎಕರೆ ಭೂಮಿಯನ್ನು ಖರೀದಿಸಲು 100 ಕೋಟಿ ರೂಪಾಯಿ ನೀಡಿ ದಾಖಲೆ ಸೃಷ್ಟಿಸಿತು. ಇದು ಇಡೀ ತೆಲಂಗಾಣದಲ್ಲೇ ದಾಖಲೆ ಎಂದು ವರದಿಯಾಗಿದೆ.

ಹೈದರಾಬಾದ್‌ನಲ್ಲಿ ಆ ದಾಖಲೆ ಮುರಿಯುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಸದ್ಯದ ಮಟ್ಟಿಗೆ ಹೈದರಾಬಾದ್‌ನಲ್ಲಿ ಅಥವಾ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುವುದು ಉತ್ತಮವೇ ಎಂಬ ಅಭಿಪ್ರಾಯ ಅಂಕಿಅಂಶಗಳಿಂದ ವ್ಯಕ್ತವಾಗಿದೆ.

ಜೀವನ ನಿರ್ವಹಣಾ ವೆಚ್ಚ ಬೆಂಗಳೂರಲ್ಲೇ ಹೆಚ್ಚು

ಅಂಕಿಅಂಶಗಳ ಪ್ರಕಾರ, ಜೀವನ ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದ ಹೋಲಿಕೆಯಲ್ಲಿ ಬೆಂಗಳೂರಿಗಿಂತಲೂ ಹೈದರಾಬಾದ್​​ ಉತ್ತಮವಾಗಿದೆ. ಹೈದರಾಬಾದ್​​ನಲ್ಲಿ ಜೀವನ ನಿರ್ವಹಣಾ ವೆಚ್ಚ ಬೆಂಗಳೂರಿಗಿಂತ ಶೇ 26ರಷ್ಟು ಕಡಿಮೆ ಎನ್ನಲಾಗಿದೆ. ಬೆಂಗಳೂರನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯಲಾಗಿದ್ದರೂ ಜೀವನ ನಿರ್ವಹಣೆ ವೆಚ್ಚದ ವಿಚಾರದಲ್ಲಿ ಅದು ಹೈದರಾಬಾದ್‌ಗಿಂತ ಹಿಂದಿದೆ.

ಅನಾರಾಕ್ ವರದಿಯಲ್ಲೇನಿದೆ?

ರಿಯಲ್ ಎಸ್ಟೇಟ್ ಮ್ಯಾನೇಜ್‌ಮೆಂಟ್ ಮತ್ತು ಕನ್ಸಲ್ಟೆನ್ಸಿ ಸಂಸ್ಥೆ ಅನಾರಕ್ ವರದಿಯ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಹೈದರಾಬಾದ್​​​ನಲ್ಲಿ ಐಷಾರಾಮಿ ಮನೆಗಳ ಸರಾಸರಿ ಬೆಲೆ ಶೇ 42 ರಷ್ಟು ಆಗಿದೆ, ಇದು ಬೆಂಗಳೂರು ಮತ್ತು ಎಂಎಂಆರ್ (ಮುಂಬೈ ಮೆಟ್ರೋಪಾಲಿಟನ್ ಪ್ರದೇಶ) ಎರಡೂ ನಗರಗಳಲ್ಲಿ ಕಂಡುಬಂದ ಶೇ 27ಕ್ಕೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ. ಇಲ್ಲಿ 1.5 ಕೋಟಿ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಮನೆಯನ್ನು ಐಷಾರಾಮಿ ಎಂದು ವ್ಯಾಖ್ಯಾನಿಸಲಾಗಿದೆ.

ಇದನ್ನೂ ಓದಿ: ನಾಳೆಯಿಂದ ಆಗಸ್ಟ್ 14ರ ವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ; ಇಲ್ಲಿದೆ ಪೂರ್ಣ ವಿವರ

ಜೂನ್ 2023 ಕ್ಕೆ ಕೊನೆಗೊಂಡ ಆರು ತಿಂಗಳ ಅವಧಿಗೆ ನೈಟ್ ಫ್ರಾಂಕ್ ವರದಿ ಪ್ರಕಾರ, ಬೆಂಗಳೂರಿನಲ್ಲಿ ವಸತಿ ಆಸ್ತಿಗಳ ಮಾರಾಟವು ಶೇ 2 ರಷ್ಟು ಕುಸಿದಿದ್ದರೆ ಹೈದರಾಬಾದ್‌ನಲ್ಲಿ ಅದು ಶೇ 5 ರಷ್ಟು ಹೆಚ್ಚಾಗಿದೆ ಎಂದು ಉಲ್ಲೇಖಿಸಲ್ಪಟ್ಟಿದೆ.

ಜನವರಿ – ಜೂನ್ ಅವಧಿಯಲ್ಲಿ ಬೆಂಗಳೂರಿನಲ್ಲಿ ಕಚೇರಿ ಸ್ಥಳದ ಬೇಡಿಕೆಯಲ್ಲಿಯೂ ಶೇ 10ರಷ್ಟು ಕುಸಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ