AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ

ಶನಿವಾರ ಸಂಜೆ ನಮ್ಮ ಮೆಟ್ರೋದ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದ ಹಳಿಗೆ ಹಾರಿ 35 ವರ್ಷದ ನವೀನ್​ ಅರೋರ ಆತ್ಮಹತ್ಯೆ ಮಾಡಿಕೊಂಡಿದ್ದರು. ನವೀನ್​ ಅರೋರ ಆತ್ಮಹತ್ಯೆಗೆ ಕಾರಣವೇನು ಎಂಬುವುದು ಟಿವಿ9 ಡಿಜಿಟಲ್​ಗೆ ತಿಳಿದು ಬಂದಿದೆ.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ
ನಮ್ಮ ಮೆಟ್ರೋ, ನವೀಬ್​ ಅರೋರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on: Aug 04, 2024 | 1:04 PM

Share

ಬೆಂಗಳೂರು, ಆಗಸ್ಟ್​ 04: ನಮ್ಮ ಮೆಟ್ರೋದ (Namma Metro) ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ 35 ವರ್ಷದ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುವುದು ತಿಳಿದುಬಂದಿದೆ. ಮೃತ ನವೀನ್ ಅರೋರ ಮೂಲತಃ ಉತ್ತರ ಪ್ರದೇಶದವರು. ನವೀನ್ ಅರೋರಗೆ 26 ವರ್ಷದ ಪುತ್ರ 22 ವರ್ಷದ ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದಾನೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದಾರೆ.

ಮೃತ ನವೀನ್ ಅರೋರ ಕಳೆದ 10 ವರ್ಷದ ಹಿಂದೆ ಕೆಆರ್​​ ಮಾರ್ಕೆರ್ಟ್​​ನಲ್ಲಿ ಹಾರ್ಡ್​ವೇರ್ ಅಂಗಡಿ ನಡೆಸುತ್ತಿದ್ದರು. ವ್ಯಾಪಾರ ವಹಿವಾಟು ಕೂಡ ಚನ್ನಾಗಿಯೇ ನಡಿತಿತ್ತು. ಬಳಿಕ ವ್ಯಾಪಾರ ನೆಲಕಚ್ಚಿ ನಷ್ಟ ಅನುಭವಿಸಿದ್ದರು. ಇದೇ ವಿಚಾರವಾಗಿ ಮನೆಯಲ್ಲಿ ಜಗಳವಾಗಿ ಮೃತ ನವೀನ್ ಅರೋರ ಬೇರಾಯಾಗಿದ್ದರು. ಮೃತ ನವೀನ್ ಅರೋರ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು, ಜೆಪಿ ನಗರದ ಹೋಟೆಲ್​ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಜೊತೆಗೆ ಕೆಆರ್​ ಮಾರ್ಕೆಟ್​ನಲ್ಲಿರುವ ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ತಂಗಿದ್ದರು.

ಇದನ್ನೂ ಓದಿ: ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನ ಸಂಚಾರ! ದಾಖಲೆ

ಮೃತ ನವೀನ್ ಅರೋರ ಸಂಬಂಧಿಕರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಇದೇ ಹಣದಲ್ಲಿ ರೂಮ್ ಬಾಡಿಗೆ, ಊಟ ತಿಂಡಿ ಅಂತ ಕಾಲ‌ ಕಳೆಯುತ್ತಿದ್ದರು. ಇನ್ನು ಉತ್ತರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಜನರ ಬಳಿ ಸಾಲ ಮಾಡಿದ್ದರು. ಮೃತ ನವೀನ್ ಅರೋರ ತಮ್ಮ ಅಣ್ಣನಿಗೆ ಆಗಾಗ ಕರೆ ಮಾಡಿ ಹಣ ಕೇಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆಯೂ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಕೇಳಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ನವೀನ್ ಅರೋರದಿಂದ ಕುಟುಂಬಸ್ಥರು ಕೂಡ ದೂರವಾಗಿದ್ದರು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾದ ನವೀನ್ ಅರೋರ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More