AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ

ಶನಿವಾರ ಸಂಜೆ ನಮ್ಮ ಮೆಟ್ರೋದ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದ ಹಳಿಗೆ ಹಾರಿ 35 ವರ್ಷದ ನವೀನ್​ ಅರೋರ ಆತ್ಮಹತ್ಯೆ ಮಾಡಿಕೊಂಡಿದ್ದರು. ನವೀನ್​ ಅರೋರ ಆತ್ಮಹತ್ಯೆಗೆ ಕಾರಣವೇನು ಎಂಬುವುದು ಟಿವಿ9 ಡಿಜಿಟಲ್​ಗೆ ತಿಳಿದು ಬಂದಿದೆ.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ
ನಮ್ಮ ಮೆಟ್ರೋ, ನವೀಬ್​ ಅರೋರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on: Aug 04, 2024 | 1:04 PM

Share

ಬೆಂಗಳೂರು, ಆಗಸ್ಟ್​ 04: ನಮ್ಮ ಮೆಟ್ರೋದ (Namma Metro) ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ 35 ವರ್ಷದ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುವುದು ತಿಳಿದುಬಂದಿದೆ. ಮೃತ ನವೀನ್ ಅರೋರ ಮೂಲತಃ ಉತ್ತರ ಪ್ರದೇಶದವರು. ನವೀನ್ ಅರೋರಗೆ 26 ವರ್ಷದ ಪುತ್ರ 22 ವರ್ಷದ ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದಾನೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದಾರೆ.

ಮೃತ ನವೀನ್ ಅರೋರ ಕಳೆದ 10 ವರ್ಷದ ಹಿಂದೆ ಕೆಆರ್​​ ಮಾರ್ಕೆರ್ಟ್​​ನಲ್ಲಿ ಹಾರ್ಡ್​ವೇರ್ ಅಂಗಡಿ ನಡೆಸುತ್ತಿದ್ದರು. ವ್ಯಾಪಾರ ವಹಿವಾಟು ಕೂಡ ಚನ್ನಾಗಿಯೇ ನಡಿತಿತ್ತು. ಬಳಿಕ ವ್ಯಾಪಾರ ನೆಲಕಚ್ಚಿ ನಷ್ಟ ಅನುಭವಿಸಿದ್ದರು. ಇದೇ ವಿಚಾರವಾಗಿ ಮನೆಯಲ್ಲಿ ಜಗಳವಾಗಿ ಮೃತ ನವೀನ್ ಅರೋರ ಬೇರಾಯಾಗಿದ್ದರು. ಮೃತ ನವೀನ್ ಅರೋರ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು, ಜೆಪಿ ನಗರದ ಹೋಟೆಲ್​ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಜೊತೆಗೆ ಕೆಆರ್​ ಮಾರ್ಕೆಟ್​ನಲ್ಲಿರುವ ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ತಂಗಿದ್ದರು.

ಇದನ್ನೂ ಓದಿ: ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನ ಸಂಚಾರ! ದಾಖಲೆ

ಮೃತ ನವೀನ್ ಅರೋರ ಸಂಬಂಧಿಕರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಇದೇ ಹಣದಲ್ಲಿ ರೂಮ್ ಬಾಡಿಗೆ, ಊಟ ತಿಂಡಿ ಅಂತ ಕಾಲ‌ ಕಳೆಯುತ್ತಿದ್ದರು. ಇನ್ನು ಉತ್ತರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಜನರ ಬಳಿ ಸಾಲ ಮಾಡಿದ್ದರು. ಮೃತ ನವೀನ್ ಅರೋರ ತಮ್ಮ ಅಣ್ಣನಿಗೆ ಆಗಾಗ ಕರೆ ಮಾಡಿ ಹಣ ಕೇಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆಯೂ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಕೇಳಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ನವೀನ್ ಅರೋರದಿಂದ ಕುಟುಂಬಸ್ಥರು ಕೂಡ ದೂರವಾಗಿದ್ದರು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾದ ನವೀನ್ ಅರೋರ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ