AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ

ಶನಿವಾರ ಸಂಜೆ ನಮ್ಮ ಮೆಟ್ರೋದ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದ ಹಳಿಗೆ ಹಾರಿ 35 ವರ್ಷದ ನವೀನ್​ ಅರೋರ ಆತ್ಮಹತ್ಯೆ ಮಾಡಿಕೊಂಡಿದ್ದರು. ನವೀನ್​ ಅರೋರ ಆತ್ಮಹತ್ಯೆಗೆ ಕಾರಣವೇನು ಎಂಬುವುದು ಟಿವಿ9 ಡಿಜಿಟಲ್​ಗೆ ತಿಳಿದು ಬಂದಿದೆ.

ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ
ನಮ್ಮ ಮೆಟ್ರೋ, ನವೀಬ್​ ಅರೋರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 04, 2024 | 1:04 PM

Share

ಬೆಂಗಳೂರು, ಆಗಸ್ಟ್​ 04: ನಮ್ಮ ಮೆಟ್ರೋದ (Namma Metro) ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ 35 ವರ್ಷದ ನವೀನ್ ಅರೋರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬುವುದು ತಿಳಿದುಬಂದಿದೆ. ಮೃತ ನವೀನ್ ಅರೋರ ಮೂಲತಃ ಉತ್ತರ ಪ್ರದೇಶದವರು. ನವೀನ್ ಅರೋರಗೆ 26 ವರ್ಷದ ಪುತ್ರ 22 ವರ್ಷದ ಪುತ್ರಿ ಹಾಗೂ ಪತ್ನಿ ಇದ್ದಾರೆ. ಪುತ್ರ ಸ್ವಂತ ಬಟ್ಟೆ ಅಂಗಡಿ ಹೊಂದಿದ್ದಾನೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾಳೆ. ಕುಟುಂಬಸ್ಥರು ಬಿಳೆಕಹಳ್ಳಿ ದಿವ್ಯಾ ಪಂಚಮಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದಾರೆ.

ಮೃತ ನವೀನ್ ಅರೋರ ಕಳೆದ 10 ವರ್ಷದ ಹಿಂದೆ ಕೆಆರ್​​ ಮಾರ್ಕೆರ್ಟ್​​ನಲ್ಲಿ ಹಾರ್ಡ್​ವೇರ್ ಅಂಗಡಿ ನಡೆಸುತ್ತಿದ್ದರು. ವ್ಯಾಪಾರ ವಹಿವಾಟು ಕೂಡ ಚನ್ನಾಗಿಯೇ ನಡಿತಿತ್ತು. ಬಳಿಕ ವ್ಯಾಪಾರ ನೆಲಕಚ್ಚಿ ನಷ್ಟ ಅನುಭವಿಸಿದ್ದರು. ಇದೇ ವಿಚಾರವಾಗಿ ಮನೆಯಲ್ಲಿ ಜಗಳವಾಗಿ ಮೃತ ನವೀನ್ ಅರೋರ ಬೇರಾಯಾಗಿದ್ದರು. ಮೃತ ನವೀನ್ ಅರೋರ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು, ಜೆಪಿ ನಗರದ ಹೋಟೆಲ್​ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಜೊತೆಗೆ ಕೆಆರ್​ ಮಾರ್ಕೆಟ್​ನಲ್ಲಿರುವ ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ತಂಗಿದ್ದರು.

ಇದನ್ನೂ ಓದಿ: ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನ ಸಂಚಾರ! ದಾಖಲೆ

ಮೃತ ನವೀನ್ ಅರೋರ ಸಂಬಂಧಿಕರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಇದೇ ಹಣದಲ್ಲಿ ರೂಮ್ ಬಾಡಿಗೆ, ಊಟ ತಿಂಡಿ ಅಂತ ಕಾಲ‌ ಕಳೆಯುತ್ತಿದ್ದರು. ಇನ್ನು ಉತ್ತರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಜನರ ಬಳಿ ಸಾಲ ಮಾಡಿದ್ದರು. ಮೃತ ನವೀನ್ ಅರೋರ ತಮ್ಮ ಅಣ್ಣನಿಗೆ ಆಗಾಗ ಕರೆ ಮಾಡಿ ಹಣ ಕೇಳುತ್ತಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆಯೂ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಕೇಳಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ನವೀನ್ ಅರೋರದಿಂದ ಕುಟುಂಬಸ್ಥರು ಕೂಡ ದೂರವಾಗಿದ್ದರು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾದ ನವೀನ್ ಅರೋರ ಮೆಟ್ರೊ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ