AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ

2023 ರಲ್ಲಿ, ಬೆಂಗಳೂರು ವಿಮಾನ ನಿಲ್ದಾಣವು 6,84,648 ಕೆಜಿ ಮಾವಿನಹಣ್ಣನ್ನು ರಫ್ತು ಮಾಡಿದ್ದರೆ, ಹಿಂದಿನ ವರ್ಷದಲ್ಲಿ 3,05,521 ಕೆಜಿ ರಫ್ತು ಮಾಡಿತ್ತು. ಇದಲ್ಲದೆ, ಈ ಋತುವಿನಲ್ಲಿ ಕಾಯಿಗಳ ರಫ್ತಿನಲ್ಲಿ ಶೇ 86 ಹೆಚ್ಚಳ ದಾಖಲಿಸಿದೆ. ವಿಮಾನ ನಿಲ್ದಾಣದ ವಿಸ್ತಾರವಾದ ರಫ್ತು ಜಾಲವು 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ವ್ಯಾಪಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು
TV9 Web
| Edited By: |

Updated on: Sep 06, 2023 | 6:27 PM

Share

ಬೆಂಗಳೂರು, ಸೆಪ್ಟೆಂಬರ್ 6: ಮಾವಿನ ಸೀಸನ್ ಮುಗಿಯುತ್ತಿದ್ದಂತೆಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (Kempegowda International Airport) ಮೂಲಕ ಮಾಡಲಾದ ಮಾವು ರಫ್ತಿನಲ್ಲಿ ದಾಖಲೆ ಪ್ರಮಾಣದ ಏರಿಕೆಯಾಗಿರುವುದು ತಿಳಿದುಬಂದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಮಾವು ರಫ್ತಿನಲ್ಲಿ ಶೇ 124ರಷ್ಟು ಏರಿಕೆ ಕಂಡಿದ್ದು, ಮೂರು ವರ್ಷಗಳ ಅವಧಿಯ ದಾಖಲೆ ಇದಾಗಿದೆ.

2023 ರಲ್ಲಿ, ಬೆಂಗಳೂರು ವಿಮಾನ ನಿಲ್ದಾಣವು 6,84,648 ಕೆಜಿ ಮಾವಿನಹಣ್ಣನ್ನು ರಫ್ತು ಮಾಡಿದ್ದರೆ, ಹಿಂದಿನ ವರ್ಷದಲ್ಲಿ 3,05,521 ಕೆಜಿ ರಫ್ತು ಮಾಡಿತ್ತು. ಇದಲ್ಲದೆ, ಈ ಋತುವಿನಲ್ಲಿ ಕಾಯಿಗಳ ರಫ್ತಿನಲ್ಲಿ ಶೇ 86 ಹೆಚ್ಚಳ ದಾಖಲಿಸಿದೆ.

ವಿಮಾನ ನಿಲ್ದಾಣದ ವಿಸ್ತಾರವಾದ ರಫ್ತು ಜಾಲವು 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ವ್ಯಾಪಿಸಿದೆ. ಈ ವರ್ಷ ಯುನೈಟೆಡ್ ಸ್ಟೇಟ್ಸ್‌ಗೆ ರಫ್ತು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅಲ್ಲಿನ ಡಲ್ಲಾಸ್ ಫೋರ್ಟ್ ವರ್ತ್, ವಾಷಿಂಗ್ಟನ್ ಡಿಸಿ ಮತ್ತು ಸ್ಯಾನ್ ಫ್ರಾನ್ಸಿಸ್ಕೋದಂತಹ ಪ್ರಮುಖ ಮೆಟ್ರೋಪಾಲಿಟನ್ ಪ್ರದೇಶಗಳು ಈ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ.

ಇದನ್ನೂ ಓದಿ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಬೆಂಗಳೂರು ವಿಮಾನ ನಿಲ್ದಾಣವು ಭಾರತದಿಂದ ಪೆರಿಷಬಲ್‌ (ಬೇಗನೆ ಹಾಳಾಗುವ ಸರಕುಗಳು) ರಫ್ತುಗಳನ್ನು ಸುಗಮಗೊಳಿಸುವಲ್ಲಿ ಚಾಲನಾ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಗಣನೀಯ ಪ್ರಮಾಣದ ಷೇರುಗಳೊಂದಿಗೆ, ದಕ್ಷಿಣ ಭಾರತದ ಮಾವಿನಹಣ್ಣಿನ ಜಾಗತಿಕ ವ್ಯಾಪ್ತಿಯನ್ನು ಹೆಚ್ಚಿಸುವಲ್ಲಿ ನಮ್ಮ ಪಾತ್ರದ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಸುವ್ಯವಸ್ಥಿತ ಕೂಲ್-ಪೋರ್ಟ್ ರಫ್ತು ಕಾರ್ಯಾಚರಣೆಗಳಿಗೆ ನಮ್ಮ ಅಚಲ ಬದ್ಧತೆಯು ವಿಮಾನ ನಿಲ್ದಾಣದ ಮಹತ್ವವನ್ನು ಒತ್ತಿ ಹೇಳುತ್ತದೆ. ಇದು ನಮ್ಮ ಪ್ರದೇಶದ ಶ್ರೀಮಂತ ಉತ್ಪನ್ನಗಳಿಗೆ ಜಗತ್ತನ್ನು ಸಂಪರ್ಕಿಸುವ ಪ್ರಮುಖ ಗೇಟ್‌ವೇ ಆಗಿದೆ ಎಂದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಮುಖ್ಯ ಕಾರ್ಯತಂತ್ರ ಮತ್ತು ಅಭಿವೃದ್ಧಿ ಅಧಿಕಾರಿ ಸತ್ಯಕಿ ರಘುನಾಥ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?