AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ: ಅಂಕಿಅಂಶ ನೋಡಿದ್ರೆ ಬೆಚ್ಚಿಬೀಳ್ತೀರಿ!

Bengaluru Road Accidents: ರಸ್ತೆ ಅಪಘಾತಗಳ ಪೈಕಿ ರಾಜ್ಯದಲ್ಲಿ ಬೆಂಗಳೂರು ಈ ವರ್ಷ ಮುಂಚೂಣಿಯಲ್ಲಿದೆ. ಈ ವರ್ಷ ಮೇ ತಿಂಗಳ ವರೆಗೆ ನಗರದಲ್ಲಿ ಸಂಭವಿಸಿದ ಅಪಘಾತಗಳ ಸಂಖ್ಯೆ ಬೆಚ್ಚಿಬೀಳಿಸುವಂತಿದೆ. ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳೂ ಹೆಚ್ಚಾಗಿದ್ದು, ಪೊಲೀಸರ ನಿದ್ದೆಗೆಡಿಸಿದೆ. ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿಸಂಖ್ಯೆ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ: ಅಂಕಿಅಂಶ ನೋಡಿದ್ರೆ ಬೆಚ್ಚಿಬೀಳ್ತೀರಿ!
ಬೆಂಗಳೂರಿನಲ್ಲಿ ಈ ವರ್ಷ ದಾಖಲೆ ಸಂಖ್ಯೆ ರಸ್ತೆ ಅಪಘಾತ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 12, 2024 | 10:15 AM

Share

ಬೆಂಗಳೂರು, ಜೂನ್ 12: ಬೆಂಗಳೂರು ನಗರದಲ್ಲಿ (Bengaluru) ಈ ವರ್ಷ ದಾಖಲೆ ಸಂಖ್ಯೆಯ ರಸ್ತೆ ಅಪಘಾತಗಳು (Accidents) ಸಂಭವಿಸಿರುವುದು ಬೆಂಗಳೂರು ಸಂಚಾರ ಪೊಲೀಸ್ (Bengaluru Traffic Police) ಅಂಕಿಅಂಶಗಳಿಂದ ತಿಳಿದುಬಂದಿದೆ. ಅದರಲ್ಲಿಯೂ ದ್ವಿಚಕ್ರ ವಾಹನ ಸವಾರರೇ ಸಂಚಾರ ನಿಯಮಗಳನ್ನು ಅತಿಹೆಚ್ಚು ಉಲ್ಲಂಘಿಸುತ್ತಿರುವುದು ತಿಳಿದುಬಂದಿದೆ. ಈ ವರ್ಷ ಮೇ ತಿಂಗಳ ವೇಳೆಗೆ 2000ಕ್ಕೂ ಹೆಚ್ಚಿನ ರಸ್ತೆ ಅಪಘಾತಗಳು ಬೆಂಗಳೂರಿನಲ್ಲಿ ಸಂಭವಿಸಿವೆ.

ಈ ಘಟನೆಗಳಲ್ಲಿ 368 ಮಾರಣಾಂತಿಕ ಮತ್ತು 1,672 ಮಾರಣಾಂತಿಕ ಅಲ್ಲದವುಗಳಾಗಿದ್ದು, 376 ಸಾವುಗಳು ಸಂಭವಿಸಿವೆ. 1,736 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಂಕಿಅಂಶಗಳು ತಿಳಿಸಿವೆ.

ಬೆಂಗಳೂರು ಟ್ರಾಫಿಕ್ ಪೋಲೀಸರ ಅಂಕಿಅಂಶ ಪ್ರಕಾರ, 2024ರಲ್ಲಿ 39,10,980 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಅಜಾಗರೂಕ ಚಾಲನೆ ಮತ್ತು ಅತಿ ವೇಗವು ಪ್ರಮುಖವಾಗಿವೆ. ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳೇ 5,433 ದಾಖಲಾಗಿವೆ. ಇದು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರ ವಿರುದ್ಧ ಕಟ್ಟು ನಿಟ್ಟಾದ ಜಾರಿ ಮತ್ತು ಜಾಗೃತಿ ಅಭಿಯಾನಗಳ ಶುರ್ತು ಅಗತ್ಯವನ್ನು ಒತ್ತಿಹೇಳುತ್ತದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಉಳಿದಂತೆ ಪರವಾನಗಿ ಇಲ್ಲದೆ ಚಾಲನೆ (2,710 ಪ್ರಕರಣಗಳು), ದೋಷಯುಕ್ತ ನಂಬರ್​ ಪ್ಲೇಟ್ (87,277 ಪ್ರಕರಣಗಳು), ಮತ್ತು ಟ್ರಾಫಿಕ್ ಸಿಗ್ನಲ್‌ ಜಂಪ್ (2,46,284 ಪ್ರಕರಣಗಳು) ಕೂಡ ಸೇರಿವೆ.

ಹೆಲ್ಮಟ್ ರಹಿತ ಚಾಲನೆ ಬಹುದೊಡ್ಡ ಸಮಸ್ಯೆಯಾಗಿಯೇ ಉಳಿದಿದೆ. 16 ಲಕ್ಷಕ್ಕೂ ಹೆಚ್ಚು ಸವಾರರು ಮತ್ತು 10 ಲಕ್ಷ ಹಿಂಬದಿ ಸವಾರರು ಹೆಲೈಟ್ ಇಲ್ಲದ ಸಿಕ್ಕಿ ಬಿದ್ದಿದ್ದಾರೆ. ಸೀಟು ಬೆಲ್ಟ್ ಧರಿಸದೇ ಸಂಚಾರ ಮಾಡಿದ 1,83, 321 ಪ್ರಕರಣಗಳು ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 48,947 ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ಚಾಲಕ ರಹಿತ ರೈಲು ಸಂಚಾರ ಸಿಗ್ನಲಿಂಗ್ ಟೆಸ್ಟ್ ಶೀಘ್ರ

ದ್ವಿಚಕ್ರ ವಾಹನಗಳು ನಿಯಮ ಉಲ್ಲಂಘನೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 33 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಟೆಂಪೋಗಳು, ಲಘು ಮೋಟಾರು ವಾಹನಗಳು, ಆಟೋರಿಕ್ಷಾಗಳು, ಸರಕು ವಾಹನಗಳು ಮತ್ತು ಬಸ್‌ಗಳು ನಿಯಮ ಉಲ್ಲಂಘನೆಯಲ್ಲಿ ನಂತರದ ಸ್ಥಾನದಲ್ಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ