ದೈಹಿಕ ಸಂಪರ್ಕ ನಿರಾಕರಿಸುವುದು ದೌರ್ಜನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ವ್ಯಕ್ತಿಯೊಬ್ಬರು ದೈಹಿಕ ಪ್ರೀತಿ ಬಿಟ್ಟು ಆಧ್ಯಾತ್ಮಕ ಸಾಧನೆಯತ್ತ ಮುಖಮಾಡಿದ್ದರು. ಇದರಿಂದ ಮನನೊಂದಿದ್ದ ಪತ್ನಿ ಪತಿ ವಿರುದ್ಧ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಅಲ್ಲದೆ, ಕ್ರೌರ್ಯದ ಕಾರಣಕ್ಕೆ ವಿಚ್ಚೇದನವನ್ನೂ ಪಡೆದುಕೊಂಡಿದ್ದರು.

ದೈಹಿಕ ಸಂಪರ್ಕ ನಿರಾಕರಿಸುವುದು ದೌರ್ಜನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕ ಹೈಕೋರ್ಟ್
Rakesh Nayak Manchi

Updated on: Jun 19, 2023 | 8:43 PM

ಬೆಂಗಳೂರು: ದೈಹಿಕ ಸಂಪರ್ಕ ನಿರಾಕರಿಸುವುದು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಆಧ್ಯಾತ್ಮಿಕ ಸಾಧನೆಯತ್ತ ಮುಖಮಾಡಿದ್ದ ಪತಿ ವಿರುದ್ಧ ಪತ್ನಿ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕದಸದಸ್ಯ ಪೀಠ, ಈ ಆದೇಶ ಹೊರಡಿಸಿದೆ.

ಮಹಿಳೆಯೊಬ್ಬರು 2019 ರ ಡಿ.18 ರಂದು ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೆ, ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಅಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು.

ಇದನ್ನೂ ಓದಿ: ಕೈ ಶಾಸಕ ವಿನಯ್ ಕುಲಕರ್ಣಿಗೆ ನಿರಾಸೆ: ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧ ಬಯಸದ ಪತಿ ವಿರುದ್ಧ ಪತ್ನಿ ಐಪಿಸಿ 498 ಎ ಅಡಿ ದೂರು ದಾಖಲಿಸಿದ್ದರು. ಅಲ್ಲದೆ, ಕ್ರೌರ್ಯದ ಕಾರಣಕ್ಕೆ ವಿಚ್ಚೇದನವನ್ನೂ ಪಡೆದುಕೊಂಡಿದ್ದರು. ಈ ಬಗ್ಗೆ ಆದೇಶ ಹೊರಡಿಸುವ ವೇಳೆ ಏಕಸದಸ್ಯ ಪೀಠವು, “ದೈಹಿಕ ಸಂಬಂಧ ನಿರಾಕರಿಸುವ ಕಾರಣಕ್ಕೆ ವಿಚ್ಚೇದನ ಪಡೆಯಬಹುದು. ಆದರೆ ಐಪಿಸಿ ಸೆ.498 ಎ ಅಡಿ ಇದು ಅಪರಾಧವಾಗುವುದಿಲ್ಲ” ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us