AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್​ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ

ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್​ ನೇತೃತ್ವದಲ್ಲಿ ಹಲವು ರೌಡಿ ಶೀಟರ್​ಗಳ ಮನೆಗಳಿಗೆ ಹೋಗಿದ್ದ ಪೊಲೀಸರು ಮೊಬೈಲ್​ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು.

ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್​ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ
ರೇಖಾ ಕದಿರೇಶ್ ದಂಪತಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 29, 2021 | 10:55 PM

Share

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಮಂಗಳವಾರ ರೌಡಿಶೀಟರ್​ಗಳ ಮನೆಗಳ ಬಳಿಗೆ ತೆರಳಿ ಎಚ್ಚರಿಕೆ ನೀಡಿದರು. ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್​ ನೇತೃತ್ವದಲ್ಲಿ ಹಲವು ರೌಡಿ ಶೀಟರ್​ಗಳ ಮನೆಗಳಿಗೆ ಹೋಗಿದ್ದ ಪೊಲೀಸರು ಮೊಬೈಲ್​ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದರು. ರೌಡಿಶೀಟರ್​ಗಳ ಮನೆಗಳಲ್ಲಿ ಮಹಿಳಾ ಸಿಬ್ಬಂದಿ ಶೋಧ ನಡೆಸಿದರು.

ರೇಖಾ ಕೊಲೆ ಆರೋಪಿಗಳಿಗಿದೆ ಅಪರಾಧದ ಇತಿಹಾಸ ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಈ ಹಿಂದೆಯೂ ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಾಹಿತಿ ಪತ್ತೆಯಾಗಿದೆ. ಆರೋಪಿ ಪೀಟರ್ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ, ಮತ್ತೊಬ್ಬ ಆರೋಪಿ ಸೂರ್ಯ 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಪೀಟರ್ ವಿರುದ್ಧ ವಿರುದ್ಧ 3 ಕೊಲೆ ಪ್ರಕರಣ, 1 ಹಲ್ಲೆ ಪ್ರಕರಣ, 2 ಡಕಾಯಿತಿ ಪ್ರಕರಣಗಳು ದಾಖಲಾಗಿವೆ. 4 ಕೇಸ್‌ಗಳಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಸೂರ್ಯನ ವಿರುದ್ಧ 2 ಕೊಲೆ ಕೇಸ್, 2 ಕೊಲೆ ಯತ್ನ ಪ್ರಕರಣಗಳಿವೆ.

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್​ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್​ಪೇಟೆ ಇನ್​ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್​ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್​ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್​ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್​ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್​ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಮಾಗಡಿ ರಸ್ತೆ ಸುಂಕದಕಟ್ಟೆ ಬಳಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳು ಸಬ್​ಇನ್​ಸ್ಪೆಕ್ಟರ್ ಕರಿಯಣ್ಣ ಮತ್ತು ಹೆಡ್ ಕಾನ್​ಸ್ಟೆಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಪೊಲೀಸರು, ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡು ಲಕ್ಷ್ಮೀ ಅಸ್ಪತ್ರೆಗೆ ದಾಖಲು ಮಾಡಿದರು. ಮಾಗಡಿ ರಸ್ತೆ ಠಾಣೆಯ ಇನ್​ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ನಿರ್ವಹಿಸಿತು.

(Rekha Kadiresh Murder Case Police Visit Rowdy Sheeter Home Warned them not to indulge in Anti Social Activities)

ಇದನ್ನೂ ಓದಿ: ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಇದನ್ನೂ ಓದಿ: Rekha Kadiresh: ರೇಖಾ ಕದಿರೇಶ್ ಹಾಡಹಗಲು ಹತ್ಯೆಯಾಗಿದ್ದು ಹೇಗೆ? ಸಂಚಲನ ಮೂಡಿಸಿದೆ ವಿಡಿಯೋ

Published On - 10:55 pm, Tue, 29 June 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ